Download Our App

Follow us

Home » ಸಿನಿಮಾ » ರಮೇಶ್ ಅರವಿಂದ್ ಹಾಗೂ ಡಾಲಿ ಧನಂಜಯ್ ಅವರಿಂದ ‘ವಿ‌ ಸಿನಿಮಾಸ್’ ಮಲ್ಟಿಪ್ಲೆಕ್ಸ್ ಅನಾವರಣ..!

ರಮೇಶ್ ಅರವಿಂದ್ ಹಾಗೂ ಡಾಲಿ ಧನಂಜಯ್ ಅವರಿಂದ ‘ವಿ‌ ಸಿನಿಮಾಸ್’ ಮಲ್ಟಿಪ್ಲೆಕ್ಸ್ ಅನಾವರಣ..!

ಕನ್ನಡ ಚಿತ್ರರಂಗದಲ್ಲಿ ಇದೊಂದು ಉತ್ತಮ ಬೆಳವಣಿಗೆ ಎಂದರೆ ತಪ್ಪಾಗಲಾರದು. ಚಿತ್ರಮಂದಿರಗಳು ಮುಚ್ಚುತ್ತಿರುವ ಈ ಸಂದರ್ಭದಲ್ಲಿ ನೂತನ ಚಿತ್ರಮಂದಿರ ಪ್ರಾರಂಭವಾಗಿರುವುದು ನಿಜಕ್ಕೂ ಖುಷಿಯ ವಿಚಾರ. ಹೌದು. ಇತ್ತೀಚಿಗೆ ಹೊಯ್ಸಳ ನಗರ, ರಾಮಮೂರ್ತಿ ನಗರದ ಮುಖ್ಯರಸ್ತೆಯಲ್ಲಿ “ವಿ ಸಿನಿಮಾಸ್” ಎಂಬ ನಾಲ್ಕು ಅಡಿಗಳ ಸುಸಜ್ಜಿತ ಮಲ್ಟಿಪ್ಲೆಕ್ಸ್ ಆರಂಭವಾಯಿತು.‌ ರಮೇಶ್ ಅರವಿಂದ್ ಚಿತ್ರಮಂದಿರವನ್ನು ಉದ್ಘಾಟಿಸಿ ಮೊದಲ ಶೋ ಗೆ ಟಿಕೆಟ್ ಪಡೆದರು. ಡಾಲಿ ಧನಂಜಯ ಪ್ರೊಜೆಕ್ಟರ್ ಚಾಲನೆ ಮಾಡಿದರು. ಹಿರಿಯ ವಿತರಕ ಮಾರ್ಸ್ ಸುರೇಶ್, ಮಾಲೀಕರಾದ ಅಜಿತ್ ಜಗದೀಶ್ ಹಾಗೂ ತಂತ್ರಜ್ಞ ಮ್ಯಾಥ್ಯೂ ಮುಂತಾದವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ವಿತರಕ ಮಾರ್ಸ್ ಸುರೇಶ್ ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿ, ಅಜಿತ್ ಅವರು ರಾಮಮೂರ್ತಿ ನಗರದಲ್ಲಿ ಸುಸಜ್ಜಿತ ಚಿತ್ರಮಂದಿರವನ್ನು‌ ನಿರ್ಮಿಸಿದ್ದಾರೆ. ಈ ಚಿತ್ರಮಂದಿರ ನೋಡಿಕೊಳ್ಳುವ ಉಸ್ತುವಾರಿಯನ್ನು ನನಗೆ ನೀಡಿದ್ದಾರೆ. ನೂರರ ಆಸುಪಾಸಿ‌ನ ಆಸನದ ವ್ಯವಸ್ಥೆಯಿದ್ದು, ಈಗಿನ ಆಧುನಿಕ ತಂತ್ರಜ್ಞಾನವನ್ನು ಹೊಂದಿದೆ. ಯಾವುದೇ ಮೂಲೆಯಲ್ಲಿ ಕುಳಿತುಕೊಂಡು ನೋಡಿದರೂ, ಪರದೆಯಲ್ಲಿ ಸಿನಿಮಾ ಚೆನ್ನಾಗಿ ಕಾಣಬೇಕು ಆ ರೀತಿ ಆಸನದ ವ್ಯವಸ್ಥೆ ಮಾಡಲಾಗಿದೆ. ಟಿಕೆಟ್ ದರ ಕೂಡ ಬೇರೆ ಮಲ್ಟಿಪ್ಲೆಕ್ಸ್ ಗಳಿಗಿಂತ ತುಂಬಾ ಕಡಿಮೆ ಇರುತ್ತದೆ. ಮೊದಲ ಪ್ರಾಧಾನ್ಯತೆ ಕನ್ನಡ ಚಿತ್ರಗಳಿಗಿರುತ್ತದೆ. ಇಂದು ಮೊದಲ ಚಿತ್ರವಾಗಿ ಡಾಲಿ ಧನಂಜಯ ಅಭಿನಯದ “ಕೋಟಿ” ಚಿತ್ರ ಪ್ರದರ್ಶನವಾಗಿದೆ ಎಂದರು.

ಏನೇ ಆಧುನಿಕ ತಂತ್ರಜ್ಞಾನ ಬಂದರೂ ಥಿಯೇಟರ್ ನಲ್ಲಿ ಸಾವಿರಾರು ಜನರ ಮಧ್ಯೆ ಕುಳಿತು ಸಿನಿಮಾ ನೋಡುವ ಅನುಭವವೇ ಬೇರೆ. ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರ ನೋಡಿ. ಚಿತ್ರಮಂದಿರ ಪ್ರಾರಂಭ ಮಾಡಿರುವ ಮಾಲೀಕರಿಗೆ ಹಾಗೂ ಮಾರ್ಸ್ ಸುರೇಶ್ ಅವರಿಗೆ ಅಭಿನಂದನೆಗಳು ಎಂದು ರಮೇಶ್ ಅರವಿಂದ್ ಹೇಳಿದರು.

ಚಿತ್ರಮಂದಿರಲ್ಲಿ ಸಿನಿಮಾ ನೋಡುವ ಖುಷಿ ಮನೆಯಲ್ಲಿ ನೋಡಿದರೆ ಬರುವುದಿಲ್ಲ. ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರವನ್ನು ನೋಡಿ ಆನಂದಿಸಿದಾಗ, ನಮ್ಮಂತಹ ನಟರಿಗೆ ಆಗುವ ಸಂತೋಷ ಅಷ್ಟಿಷ್ಟಲ್ಲ. ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರಗಳನ್ನು ನೋಡಿ ಎಂದು ತಿಳಿಸಿದ ಡಾಲಿ ಧನಂಜಯ, “ವಿ ಸಿನಿಮಾಸ್” ಗೆ ಶುಭ ಹಾರೈಸಿದರು.

ಇದನ್ನೂ ಓದಿ : ರೇಣುಕಾಸ್ವಾಮಿ ಕೊ*ಲೆ ಕೇಸ್ : ಪವಿತ್ರಗೌಡ ಚಪ್ಪಲಿಗಾಗಿ ಪೊಲೀಸರ ಶೋಧ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here