ಬೆಳಗಾವಿ : ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸುತ್ತಿದೆ. ಇದರ ನಡುವೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಮಹಾನ್ ನಾಯಕನ ಮುಂದಿನ ಟಾರ್ಗೆಟ್ ಸಿದ್ದು ಮತ್ತು ಪರಮೇಶ್ವರ್, ನನಗಾದ ಪರಿಸ್ಥಿತಿಯೇ ಸಿದ್ದರಾಮಯ್ಯ, ಪರಮೇಶ್ವರ್ಗೂ ಆಗಬಹುದು. ಸಿದ್ದರಾಮಯ್ಯ, ಪರಮೇಶ್ವರ್ ಅವರದ್ದೂ ಮುಂದೆ ಸಿಡಿ ಬರಬಹುದು ಎಂದಿದ್ದಾರೆ.
ಈ ಬಗ್ಗೆ ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿ ಮಾತನಾಡಿ, ಮೊದಲಿನಿಂದಲೂ ಸಿಡಿ ವಿಚಾರದ ಕುರಿತು ಪದೇ-ಪದೇ ಹೇಳಿದ್ದೆ. ನನ್ನ ಮಾತನ್ನು ಎಲ್ಲರೂ ಗಂಭೀರವಾಗಿ ಪರಿಗಣಿಸಲೇ ಇಲ್ಲ, ದಯವಿಟ್ಟು ಗೃಹ ಸಚಿವರು, ಮುಖ್ಯಮಂತ್ರಿಗಳು ಆಲೋಚಿಸಬೇಕು. ಪಕ್ಷಾತೀತವಾಗಿ ಇದಕ್ಕೆ ಇತಿಶ್ರೀ ಹಾಡುವ ಪ್ರಯತ್ನ ಆಗಬೇಕು, ಸಿಎಂ ಅವರ ಕೈ ಮುಗಿದು ಕೇಳಿಕೊಳ್ಳುವೆ ಎಂದು ಹೇಳಿದ್ದಾರೆ.
ಹಾಗೆಯೇ, ಪ್ರಜ್ವಲ್ ಕೇಸ್ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಆಡಿಯೋ ಸುತ್ತು ಹಾಕಿ ಇದೆ. ನನ್ನ ಪ್ರಕರಣದಲ್ಲಿ ಡಿಕೆ ನೇರವಾಗಿ ಭಾಗಿಯಾಗಿರುವ ಬಗ್ಗೆ ಸಾಕ್ಷ್ಯಗಳಿವೆ. ನನ್ನ ಪ್ರಕರಣದಲ್ಲಿ ಡಿಕೆ ನೇರವಾಗಿ ಭಾಗಿಯಾಗಿರುವ ಬಗ್ಗೆ ಸಾಕ್ಷ್ಯಗಳಿವೆ. ನನ್ನ ಕೇಸ್ನಲ್ಲಿ ಡಿಕೆ ಮಾತನಾಡಿರುವ ಬಗ್ಗೆ ಸಾಕ್ಷ್ಯ ಇದೆ. ಡಿ.ಕೆ.ಶಿವಕುಮಾರ್ ಷಡ್ಯಂತ್ರ ಮಾಡಿರುವ ಬಗ್ಗೆ ಸಾಕ್ಷ್ಯಗಳು ಇವೆ. ನಾನು ಮಾಧ್ಯಮಗಳಿಗೆ ಈ ಸಾಕ್ಷ್ಯಗಳನ್ನು ಬಿಡುಗಡೆ ಮಾಡಲ್ಲ. ಪ್ರಕರಣವನ್ನು ಸಿಬಿಐಗೆ ನೀಡಿದ್ರೆ ಎಲ್ಲಾ ಸಾಕ್ಷ್ಯ ಕೊಡುತ್ತೇನೆ ಎಂದಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ ಕೇಸ್ ಯಾರು ಹೆಮ್ಮೆಪಡುವ ವಿಷಯವಲ್ಲ. ಎಲ್ಲರೂ ತಲೆತಗ್ಗಿಸುವ ವಿಷಯ, ಬಹಳ ಕೆಟ್ಟ ಪ್ರಮಾಣದಲ್ಲಿ ಆಗಿದೆ. ಸಂಸದ ಪ್ರಜ್ವಲ್ ರೇವಣ್ಣ ಕಾನೂನು ರೀತಿ ಹೋರಾಟ ಮಾಡಲಿ. ಕಾನೂನು ಒಂದೇ ಅದಕ್ಕೆ ಉತ್ತರ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ..!