Download Our App

Follow us

Home » ಅಪರಾಧ » ರಾಮೇಶ್ವರಂ ಕೆಫೆ ಬ್ಲಾಸ್ಟ್ ಕೇಸ್ : ಆರೋಪಿ ತುಮಕೂರು ಮೂಲಕ ಬಳ್ಳಾರಿಗೆ ಹೋಗಿರೋ ಶಂಕೆ..!

ರಾಮೇಶ್ವರಂ ಕೆಫೆ ಬ್ಲಾಸ್ಟ್ ಕೇಸ್ : ಆರೋಪಿ ತುಮಕೂರು ಮೂಲಕ ಬಳ್ಳಾರಿಗೆ ಹೋಗಿರೋ ಶಂಕೆ..!

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧಿಸಿದಂತೆ NIA ತಂಡ ತನಿಖೆ ಚುರುಕುಗೊಳಿಸಿದೆ. ಆರೋಪಿಯ ಪತ್ತೆಗೆ ಬಳ್ಳಾರಿ, ತುಮಕೂರಿನಲ್ಲಿ NIA ಟೀಂ ಶೋಧ ನಡೆಸಿದೆ.

ನಿನ್ನೆ ತುಮಕೂರಿನಲ್ಲಿ ತನಿಖೆ ನಡೆಸಿದ ಎನ್​ಐಎ ತಂಡ ತಡರಾತ್ರಿಯಿಂದ ಬೆಳಗಿನ ಜಾವದವರೆಗೂ ಬಳ್ಳಾರಿ ಬಸ್ ನಿಲ್ದಾಣದಲ್ಲಿ ಮಾಹಿತಿ ಪಡೆದುಕೊಂಡಿದೆ. ಈ ವೇಳೆ ಅಧಿಕಾರಿಗಳಿಗೆ ಬಳ್ಳಾರಿ ಮತ್ತು ತುಮಕೂರು ಪೊಲೀಸರು ಸಾಥ್ ನೀಡಿದ್ದಾರೆ.

ಆರೋಪಿ ಬಾಂಬ್​ ಬಾಸ್ಟ್​ ನಡೆಸಿದ ಬಳಿಕ ತುಮಕೂರು ಮೂಲಕ ಬಳ್ಳಾರಿ ಬಸ್ ನಿಲ್ದಾಣಕ್ಕೆ ಬಂದಿದಿದ್ದಾನೆ ಎಂಬ ಮಾಹಿತಿ ಆಧಾರವಾಗಿ ಎನ್​ಐಎ ತಂಡ ತನಿಖೆ ನಡೆಸಿದೆ. ಬಳ್ಳಾರಿ ಬಸ್ ನಿಲ್ದಾಣದಿಂದ ಮಂತ್ರಾಲಯ, ಗೋಕರ್ಣ ಬಸ್ ಮೂಲಕ ಭಟ್ಕಳಕ್ಕೆ ತೆರಳಿದ್ದಾನೆ ಅನ್ನೋ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಎನ್​ಐಎ ಅಧಿಕಾರಿಗಳು ಬಳ್ಳಾರಿ ನಿಲ್ದಾಣಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ಆರೋಪಿ​ ಬಳ್ಳಾರಿ ಮೂಲಕ ಆಂಧಕ್ಕೂ ಪ್ರಯಾಣಿಸಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಆಂಧ್ರ ಪೊಲೀಸರೂ ಅಲರ್ಟ್ ಆಗಿದ್ದಾರೆ. ಬೆಂಗಳೂರಿಂದ ಎರಡು ತಂಡಗಳು ಎರಡು ಕಾರುಗಳಲ್ಲಿ ಬಂದು ತನಿಖೆ ನಡೆಸಿದ್ದಾರೆ. ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಬಂದಿದ್ದಾರೆ. ಬಳ್ಳಾರಿಯಿಂದಲೇ ಬೇರೆಡೆ ತೆರಳಿದ ಹಿನ್ನಲೆ ಬಳ್ಳಾರಿ ನಿಲ್ದಾಣದಲ್ಲಿ ಮಾಹಿತಿ ಪಡೆದಿದ್ದಾರೆ.

ಆರೋಪಿಯ ಮತ್ತೊಂದು ಫೋಟೊ ರಿವೀಲ್ : ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿಯ ಮತ್ತೊಂದು ಫೋಟೊ ರಿವೀಲ್​​​ ಆಗಿದೆ. BMTC ಬಸ್​ನಲ್ಲಿ ಪ್ರಯಾಣ ಮಾಡಿದ್ದ ಫೋಟೋ ಲಭ್ಯವಾಗಿದೆ. BMTC ಬಸ್​ನ ಸಿಸಿಟಿವಿಯಲ್ಲಿ ಬಾಂಬರ್​​ ಫೋಟೋ ಸೆರೆಯಾಗಿದೆ.

ಇದನ್ನೂ ಓದಿ : ಬೆಂಗಳೂರು ವಾಟರ್​​ ಟ್ಯಾಂಕರ್​ ಲೂಟಿಗೆ ಬ್ರೇಕ್​​​ : ಖಾಸಗಿ ಟ್ಯಾಂಕರ್​ಗಳಿಗೆ ರೇಟ್​ ಫಿಕ್ಸ್​ ಮಾಡಿದ ಜಿಲ್ಲಾಡಳಿತ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here