Download Our App

Follow us

Home » ರಾಜ್ಯ » ಪಿಎಸ್ಐ ನೇಮಕಾತಿಗೆ ರಾಜ್ಯದಲ್ಲಿ ಇಂದು ಮರು ಪರೀಕ್ಷೆ…!

ಪಿಎಸ್ಐ ನೇಮಕಾತಿಗೆ ರಾಜ್ಯದಲ್ಲಿ ಇಂದು ಮರು ಪರೀಕ್ಷೆ…!

ಬೆಂಗಳೂರು : ಮೂರು ವರ್ಷಗಳ ಬಳಿಕ ರಾಜ್ಯದಲ್ಲಿ ಇಂದು ಪಿಎಸ್ಐ ಪರೀಕ್ಷೆ ನಡೆಯಲಿದೆ. ಬೆಂಗಳೂರಿನ 117 ಸೆಂಟರ್​​ಗಳಲ್ಲಿ ಪಿಎಸ್ಐ ನೇಮಕಾತಿ ಮರು ಪರೀಕ್ಷೆ ನಡೆಯಲಿದೆ. ಕಳೆದ ಬಾರಿಯ ಪಿಎಸ್ಐ ಸ್ಕ್ಯಾಮ್ ದೇಶ ಮಟ್ಟದಲ್ಲಿ ಸದ್ದು ಮಾಡಿದ್ದ ಹಿನ್ನೆಲೆಯಿಂದಾಗಿ ಈ ಬಾರಿ ಪೊಲೀಸರು ನಗರದಾದ್ಯಂತ ಕಟ್ಟೆಚ್ಚರವಹಿಸಿದ್ದಾರೆ.

ನಗರದ 117 ಸೆಂಟರ್ ಗಳಲ್ಲಿ ಪೊಲೀಸರು ಕಣ್ಗಾವಲು ಇಟ್ಟಿದ್ದಾರೆ. ಕಮಿಷನರ್ ದಯಾನಂದ್ ಈಗಾಗಲೇ ಎಕ್ಸಾಂ ಸೆಂಟರ್​​ಗಳ ಸುತ್ತ ಮುತ್ತ 144 ಸೆಕ್ಷನ್ ಜಾರಿ ಮಾಡಲು ಆದೇಶಿಸಿದ್ದಾರೆ. 1000ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ, ಸಿಬ್ಬಂದಿಯಿಂದ ಬಂದೋಬಸ್ತ್ ಮಾಡಲಾಗಿದೆ.

ಪರೀಕ್ಷೆಗೆ ಬರುವ ಅಭ್ಯರ್ಥಿಗಳನ್ನ ಪೊಲೀಸರು ಕಂಪ್ಲೀಟ್ ಚೆಕ್ ಮಾಡಿ ಒಳ ಬಿಡಲಿದ್ದು, ವಸ್ತ್ರ ಸಂಹಿತೆ ಪಾಲನೆಯಲ್ಲಿ ಸ್ವಲ್ಪ ಡೌಟ್ ಬಂದ್ರೂ ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ಎಲೆಕ್ಟ್ರಾನಿಕ್ ಡಿವೈಸ್​​ಗಳ ಡಿಟೆಕ್ಟರ್​​ಗಳ ಮೂಲಕ ಸ್ಕ್ಯಾನಿಂಗ್ ಮಾಡಲಿದ್ದಾರೆ. ಅನುಮಾನಸ್ಪದವಾಗಿ ಯಾರೇ ಕಂಡ್ರೂ ಅವರನ್ನ ಕೂಡಲೇ ಪೊಲೀಸರು ವಶಪಡೆಯಲಿದ್ದಾರೆ.

ಈಗಾಗಲೇ ಲಿಂಗಯ್ಯ ಎಂಬಾತ ಅಕ್ರಮಕ್ಕೆ ಯತ್ನಿಸಿರೊ ಆರೋಪ ಕೇಳಿ ಬಂದಿರೋ ಹಿನ್ನೆಲೆಯಿಂದಾಗಿ ಪ್ರತೀ ಹಂತದಲ್ಲೂ ಪೊಲೀಸರು ಜಾಗ್ರತೆ ವಹಿಸಿದ್ದಾರೆ. ಪೊಲೀಸರು ಲಿಂಗಯ್ಯನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಬೆಂಗಳೂರು ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.

ಇದನ್ನೂ ಓದಿ : ಅಬ್ಬಬ್ಬಾ ಬಿಗ್ ಬಾಸ್ ಬಗ್ಗೆ ಅಚ್ಚರಿ ಮೂಡಿಸಿದ ತನಿಷಾ ಕುಪ್ಪಂಡ… ಹೇಳಿದ್ದೇನು ನೋಡಿ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ದುರ್ಮರಣ..!

ಬೆಂಗಳೂರು : ನಗರದಲ್ಲಿ ಸೆ.6ರ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್(32) ಅಪಘಾತದಲ್ಲಿ ಮೃತನಾದ

Live Cricket

Add Your Heading Text Here