Download Our App

Follow us

Home » ರಾಜ್ಯ » ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್..!

ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿದ ಸುಪ್ರೀಂಕೋರ್ಟ್..!

ಚುನಾವಣಾ ಬಾಂಡ್‌ ಯೋಜನೆಯ ಕುರಿತು ಸುಪ್ರೀಂಕೋರ್ಟ್​ ಮಹತ್ವದ ತೀರ್ಪು ನೀಡಿದೆ. ಈ ಯೋಜನೆಯು ಸಂವಿಧಾನ ಬಾಹಿರವಾಗಿದೆ. ಹೀಗಾಗಿ ಬಾಂಡ್​ಗಳನ್ನು ರದ್ದು ಮಾಡಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.

ಚುನಾವಣಾ ಬಾಂಡ್ ಬಗ್ಗೆ ಕಾನೂನು ಮಾನ್ಯತೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ಎಲೆಕ್ಷನ್​​ ಬಾಂಡ್​ನಿಂದ ಕಪ್ಪು ಹಣ ನಿಗ್ರಹ ಅಸಾಧ್ಯವಾಗಿದ್ದು, ಎಲೆಕ್ಟೋರಲ್​​ ಬಾಂಡ್​ಗಳು ಸಂವಿಧಾನಕ್ಕೆ ವಿರುದ್ಧವಾಗಿದೆ.

2019ರ ನಂತರದ ಎಲೆಕ್ಟೋರಲ್​​ ಇ-ಬಾಂಡ್​ಗಳ ಕುರಿತು SBIನಿಂದ ಕೋರ್ಟ್​ ಮಾಹಿತಿ ಕೇಳಿದೆ. ಇದೀಗ ಎಲೆಕ್ಷನ್​ ಇ-ಬಾಂಡ್​ಗಳನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಎಲೆಕ್ಟೋರಲ್​​​ ಇ-ಬಾಂಡ್​ಗಳ ಸಿಂಧುತ್ವದ ಬಗ್ಗೆ ಅರ್ಜಿ ಪ್ರಶ್ನೆ ಮಾಡಿತ್ತು, ಸಿಜೆಐ ನೇತೃತ್ವದ ಸಾಂವಿಧಾನಿಕ ಪೀಠ ಅರ್ಜಿ ವಿಚಾರಣೆ ಮಾಡಿತ್ತು.
ಬ್ಯಾಂಕ್​ಗಳು ಎಲೆಕ್ಟೋರಲ್​​ ಬಾಂಡ್​ ನಿಲ್ಲಿಸುವಂತೆ ಕೋರ್ಟ್​ ಆದೇಶ ನೀಡಿದ್ದು, ಎಲೆಕ್ಷನ್​ ಇ-ಬಾಂಡ್​ಗಳು ಆರ್ಟಿಕಲ್​​​ 19(1A)ಉಲ್ಲಂಘನೆಯಾಗಿದೆ.

ಚುನಾವಣಾ ಬಾಂಡ್ ಯೋಜನೆಯನ್ನು ಟೀಕಿಸಿದ ಸುಪ್ರೀಂ ಕೋರ್ಟ್, ರಾಜಕೀಯ ಪಕ್ಷಗಳು ಪಡೆಯುತ್ತಿರುವ ಹಣದ ಬಗ್ಗೆ ಮಾಹಿತಿ ಪಡೆಯುವುದು ಬಹಳ ಮುಖ್ಯ ಎಂದು ಹೇಳಿದೆ. ಚುನಾವಣಾ ಬಾಂಡ್‌ಗಳು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ಸದಸ್ಯರ ಸಂವಿಧಾನ ಪೀಠವು ಕಳೆದ ವರ್ಷ ನವೆಂಬರ್ 2 ರಂದು ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು, ಅದು ಇಂದು ಪ್ರಕಟವಾಯಿತು.

ಇದನ್ನೂ ಓದಿ : ಮಂಗಳೂರು ಸ್ಕೂಲ್​​ ಬಳಿ ಪ್ರತಿಭಟನೆ ಪ್ರಕರಣ : MLA ವೇದವ್ಯಾಸ ಕಾಮತ್​ ಸೇರಿ 6 ಮಂದಿ ವಿರುದ್ಧ FIR..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here