Download Our App

Follow us

Home » ಅಪರಾಧ » ರೇಣುಕಾಸ್ವಾಮಿ ಕೊ*ಲೆ ಕೇಸ್​​​ : ನಟ ದರ್ಶನ್​, ಪವಿತ್ರಾ ಸೇರಿ 13 ಆರೋಪಿಗಳು ಪೊಲೀಸ್ ಕಸ್ಟಡಿಗೆ..!

ರೇಣುಕಾಸ್ವಾಮಿ ಕೊ*ಲೆ ಕೇಸ್​​​ : ನಟ ದರ್ಶನ್​, ಪವಿತ್ರಾ ಸೇರಿ 13 ಆರೋಪಿಗಳು ಪೊಲೀಸ್ ಕಸ್ಟಡಿಗೆ..!

ಸ್ಯಾಂಡಲ್​ವುಡ್ ನಟ,​ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ರೇಣುಕಾಸ್ವಾಮಿ ಎಂಬ ಯುವಕನ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಈಗಾಗಲೇ ನಟ ದರ್ಶನ್ ಸೇರಿ ಪವಿತ್ರಾ ಗೌಡ, ವಿನಯ್, ಆರ್. ನಾಗರಾಜು, ಎಂ. ಲಕ್ಷ್ಮಣ್​, ಎಸ್​. ಪ್ರದೋಶ್​, ಕೆ. ಪವನ್, ದೀಪಕ್​ ಕುಮಾರ್, ನಂದೀಶ್​, ಕಾರ್ತಿಕ್​, ನಿಕಿಲ್ ನಾಯಕ್​, ಕೇಶವಮೂರ್ತಿ, ರಾಘವೇಂದ್ರ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

​ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್ ಮುಗಿದ ನಂತರ ದರ್ಶನ್‌ ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಜಡ್ಜ್ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಬಳಿಕ ಪೊಲೀಸರು ದರ್ಶನ್​​, ಪವಿತ್ರ ಸೇರಿ 13 ಮಂದಿಯನ್ನು ಕಸ್ಟಡಿಗೆ ಹೇಳಿದ್ದರು.

ಇದೀಗ ಎರಡು ಕಡೆ ವಾದ- ಪ್ರತಿವಾದ ಆಲಿಸಿದ ನ್ಯಾಯಾಧೀಶ ವಿಶ್ವನಾಥ್​​ ಗೌಡರ್​​ ನಟ ದರ್ಶನ್, ಪವಿತ್ರಾ ಗೌಡ ಸೇರಿ  13 ಮಂದಿಯನ್ನು ಪೊಲೀಸ್​​ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ : ಡಾಲಿ ಧನಂಜಯ್​ ಅಭಿನಯದ ಬಹುನಿರೀಕ್ಷಿತ ‘ಕೋಟಿ’ ಸಿನಿಮಾ ಜೂ.14ಕ್ಕೆ ರಿಲೀಸ್​​​..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here