ಬೆಂಗಳೂರು : ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್ ಪಡೆದಿದ್ದಾರೆ. ಹೀಗಾಗಿ ಹೆಚ್.ಡಿ.ರೇವಣ್ಣ ನಡೆ ತೀವ್ರ ಕುತೂಹಲ ಕೆರಳಿಸಿದೆ. ಮೂರ್ತಿನಾಯಕ್ ನಿನ್ನೆ ರೇವಣ್ಣಗೆ ನಿರೀಕ್ಷಣಾ ಜಾಮೀನು ನೀಡಲು ವಾದ ಮಾಡಿದ್ದರು. ಆದರೆ ಇಂದು SIT ಆಕ್ಷೇಪಣೆ ಸಲ್ಲಿಸಿದ ನಂತರ ಅರ್ಜಿ ವಾಪಸ್ ಪಡೆದಿದ್ದಾರೆ. ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಇಂದು ವಿಚಾರಣೆ ನಡೆಯಿತು.
ರೇವಣ್ಣ ಪರ ವಾದ ಮಂಡಿಸಿದ ವಕೀಲರು, ಬಲವಂತದ ಕ್ರಮ ಕೈಗೊಳ್ಳದಂತೆ ಮನವಿ ಮಾಡಿದರು. ರೇವಣ್ಣ ವಿರುದ್ಧ IPC-376 ಸೆಕ್ಷನ್ ದಾಖಲಾಗಿಲ್ಲ. ರೇವಣ್ಣ ವಿರುದ್ಧ ಯಾವುದೇ ನಾನ್ ಬೇಲಬಲ್ ಸೆಕ್ಷನ್ ಹಾಕಿಲ್ಲ, IPC-376 ಸೇರಿದಂತೆ ಯಾವುದೇ ನಾನ್ ಬೇಲಬಲ್ ಕೇಸ್ ಹಾಕಿಲ್ಲ ಎಂದು ವಿಚಾರಣೆ ವೇಳೆ SIT ಪರ ವಕೀಲರಾದ SPP ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರೇವಣ್ಣ ಪರ ವಕೀಲರು ನಿರೀಕ್ಷಣಾ ಜಾಮೀನು ಅರ್ಜಿ ವಾಪಸ್ ಪಡೆದಿದ್ದಾರೆ.
ಹೆಚ್.ಡಿ.ರೇವಣ್ಣ ಬಂಧನ ಸಂಕಷ್ಟದಿಂದ ಪಾರಾಗಿದ್ದು, ಅರೆಸ್ಟ್ ಮಾಡಲ್ಲ ಅಂತಾ ಗೊತ್ತಾಗ್ತಿದ್ದಂತೆ ಬೇಲ್ ಅರ್ಜಿ ವಾಪಸ್ ಪಡೆದಿದ್ದಾರೆ. ರೇವಣ್ಣ SIT ಮುಂದೆ ಹಾಜರಾಗಲು ನಿರ್ಧರಿಸಿದ್ದು, ಯಾವುದೇ ಕ್ಷಣದಲ್ಲಿ ರೇವಣ್ಣ SIT ಮುಂದೆ ಹಾಜರಾಗುವ ಸಾಧ್ಯತೆಯಿದೆ.
ಇದನ್ನೂ ಓದಿ : ಹಾವೇರಿ : ಮಗ ಯುವತಿಯನ್ನು ಕರೆದುಕೊಂಡು ಹೋಗಿದ್ದಕ್ಕೆ ತಾಯಿಯನ್ನು ಕಂಬಕ್ಕೆ ಕಟ್ಟಿ ಹ*ಲ್ಲೆ..!