ಬೆಂಗಳೂರು : ಕಿಡ್ನಾಪ್ ಕೇಸ್ನಲ್ಲಿ ಬೇಲ್ ಪಡೆದು ಹೊರಬಂದ್ರೂ ರೇವಣ್ಣಗೆ ಇನ್ನೊಂದು ಕಂಟಕ ಶುರುವಾಗಿದೆ. ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ಕಿರುಕುಳ ಕೇಸ್ನಲ್ಲಿ ರೇವಣ್ಣ ಪ್ರಮುಖ ಆರೋಪಿಯಾಗಿದ್ದಾರೆ. ಇದೀಗ ಈ ಪ್ರಕರಣ ಸಂಬಂಧ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.
ಸದ್ಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರೋ ಲೈಂಗಿಕ ಕಿರುಕುಳ ಕೇಸ್ನಲ್ಲಿ ರೇವಣ್ಣ ಮತ್ತೆ ಬಂಧನದ ಭೀತಿ ಎದುರಿಸುತ್ತಿದ್ದು, ಈ ಪ್ರಕರಣ ಸಂಬಂಧ ರೇವಣ್ಣ ಬೆಂಗಳೂರಿನ 42ನೇ ಎಸಿಎಂಎಂ ಜನಪ್ರತಿನಿಧಿಗಳ ಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.
ನಿನ್ನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮಾಜಿ ಸಚಿವರಿಗೆ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಾಲಯ ಇಂದು ಮಧ್ಯಾಹ್ನ 3 ಗಂಟೆವರೆಗೆ ಮಾತ್ರ ರೇವಣ್ಣರಿಗೆ ರಿಲೀಫ್ ಕೊಟ್ಟಿತ್ತು. ಇಂದು ಮಧ್ಯಾಹ್ನ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ವಿಚಾರಣೆ ನಡೆದಿದ್ದು, ಇದೀಗ ಕೋರ್ಟ್ ವಾದ ವಿವಾದಗಳನ್ನು ಆಲಿಸಿ ಜಾಮೀನು ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.
ಇದನ್ನೂ ಓದಿ : ಒಟಿಟಿ ಅಬ್ಬರದಿಂದ ಚಿತ್ರಮಂದಿರಗಳಿಗೆ ಕಂಟಕ : 94 ಸಿನಿಮಾ ರಿಲೀಸ್ ಆದ್ರೂ ಒಂದೂ ಹಿಟ್ ಲಿಸ್ಟ್ನಲ್ಲಿಲ್ಲ..!