ಬೆಂಗಳೂರು : ಕೆ.ಆರ್.ನಗರ ಕಿಡ್ನಾಪ್ ಕೇಸ್ನಲ್ಲಿ ಬಂಧನದಲ್ಲಿದ್ದ ಮಾಜಿ ಸಚಿವ ಹೆಚ್.ಡಿ ರೇವಣ್ಣ ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ. ನಿನ್ನೆ ಸಂಜೆ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಇಂದು ಪರಪ್ಪನ ಅಗ್ರಹಾರ ಕಾರಾಗೃಹದಿಂದ ರಿಲೀಸ್ ಮಾಡಲಾಗಿದೆ.
ಹೆಚ್.ಡಿ ರೇವಣ್ಣ ಅವರು ಕಳೆದ 6 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೆರೆವಾಸ ಅನುಭವಿಸಿದ್ದರು. ಮಹಿಳೆ ಕಿಡ್ನಾಪ್ ಕೇಸ್ನಲ್ಲಿ ಬಂಧನವಾಗಿದ್ದ ರೇವಣ್ಣ ಅವರಿಗೆ ನಿನ್ನೆ ಜನಪ್ರತಿನಿಧಿಗಳ ಕೋರ್ಟ್ ಜಾಮೀನು ನೀಡಿತ್ತು.
7 ದಿನಗಳ ನಂತರ ಜೈಲಿನಿಂದ ಹೊರಬಂದಿರುವ ಹೆಚ್.ಡಿ ರೇವಣ್ಣ ಅವರು ದೇವೇಗೌಡರ ನಿವಾಸಕ್ಕೆ ತೆರಳಿ ತಂದೆ, ತಾಯಿ ಆಶೀರ್ವಾದ ಪಡೆದಿದ್ದಾರೆ. ದೇವೇಗೌಡರು-ಚನ್ನಮ್ಮ ಕಾಲಿಗೆ ಬಿದ್ದ ರೇವಣ್ಣ ಅವರು ನಾನೇನು ತಪ್ಪು ಮಾಡಿಲ್ಲ. ಎಲ್ಲಾ ಸೇರಿ ಸಿಕ್ಕಾಕ್ಕಿಸಿದ್ರು ಎಂದು ಕಣ್ಣೀರು ಹಾಕಿದ್ದಾರೆ.
ಇದನ್ನೂ ಓದಿ : ತಿಮಿಂಗಿಲ ಎಂದ ಹೆಚ್ಡಿಕೆಗೆ ಡಿಕೆಶಿ ತಿರುಗೇಟು : ಹೇಳಿದ್ದೇನು?
Post Views: 396