Download Our App

Follow us

Home » ರಾಜಕೀಯ » ಈಶ್ವರಪ್ಪಗೆ ಕಡಿ, ಬಡಿ, ಕತ್ತರಿಸು ಬಿಟ್ಟು ಬೇರೆ ಭಾಷೆ ಗೊತ್ತಿಲ್ಲ.. RSS ಟ್ರೈನಿಂಗ್ ನೀಡಿದ್ದು ಇದೇನಾ? : ಸಿದ್ದರಾಮಯ್ಯ ಆಕ್ರೋಶ..!

ಈಶ್ವರಪ್ಪಗೆ ಕಡಿ, ಬಡಿ, ಕತ್ತರಿಸು ಬಿಟ್ಟು ಬೇರೆ ಭಾಷೆ ಗೊತ್ತಿಲ್ಲ.. RSS ಟ್ರೈನಿಂಗ್ ನೀಡಿದ್ದು ಇದೇನಾ? : ಸಿದ್ದರಾಮಯ್ಯ ಆಕ್ರೋಶ..!

ಬೆಂಗಳೂರು : ‘ಸಂಸದ ಡಿ.ಕೆ.ಸುರೇಶ್‌ ಹಾಗೂ ಶಾಸಕ ವಿನಯ್‌ ಕುಲಕರ್ಣಿ ರಾಷ್ಟ್ರದ್ರೋಹಿಗಳು. ಇವರ ಹಾಗೆ ದೇಶ ವಿಭಜನೆಯ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸುತ್ತೇನೆ’ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿರುವುದಕ್ಕೆ ಕಾಂಗ್ರೆಸ್ ಕಿಡಿಕಾರಿದೆ.

ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಸಾಲು-ಸಾಲು ನಾಯಕರ ಕಿಡಿಕಾರಿದ್ದು, ಬೆಂಗಳೂರಿನಲ್ಲಿ ಕಾಂಗ್ರೆಸ್​ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಗಿದೆ. ಈಶ್ವರಪ್ಪ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್​ ಪ್ರೊಟೆಸ್ಟ್ ನಡೆಸಿದೆ.

ಈಶ್ವರಪ್ಪ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕೂಡ ಕಿಡಿಕಾರಿದ್ದು, ಈಶ್ವರಪ್ಪಗೆ ಕಡಿ, ಬಡಿ, ಕತ್ತರಿಸು ಬಿಟ್ಟು ಬೇರೆ ಭಾಷೆ ಗೊತ್ತಿಲ್ಲ. ಈಶ್ವರಪ್ಪ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. RSSನಿಂದ ಈಶ್ವರಪ್ಪ ಪಡೆದಿರೋ ಟ್ರೈನಿಂಗ್​ ಇದೇನಾ..? ರಾಜಕೀಯ ಪಕ್ಷದ ಮುಖಂಡರಾಗಿ ಕೊಲ್ಲೋ ಹೇಳಿಕೆ ಸರಿಯಲ್ಲ ಎಂದು ಚಿತ್ರದುರ್ಗದಲ್ಲಿ ಈಶ್ವರಪ್ಪ ಮೇಲೆ ಸಿಎಂ ಸಿದ್ದು ಗರಂ ಆಗಿದ್ದಾರೆ.

ಬೆಂಗಳೂರಿನಲ್ಲಿ ಗೃಹ ಸಚಿವ ಪರಮೇಶ್ವರ್​​ ಕೂಡಾ ಈಶ್ವರಪ್ಪ ಮಾತಿನ ವಿರುದ್ದ ಗುಡುಗಿದ್ದಾರೆ. ದೂರು ಕೊಟ್ಟರೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೋಂ ಮಿನಿಸ್ಟರ್ ಪೊಸ್ಟ್ ಮಾಡಿದ್ದಾರೆ. ದಾವಣಗೆರೆಯಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ಗುರುವಾರ ಮಾತನಾಡಿದ್ದ ಈಶ್ವರಪ್ಪ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಇದನ್ನೂ ಓದಿ : ಚೌಧರಿ ಚರಣ್ ಸಿಂಗ್‌, ಪಿ.ವಿ ನರಸಿಂಹರಾವ್, ಎಂ.ಎಸ್ ಸ್ವಾಮಿನಾಥನ್‌ಗೆ ಭಾರತ ರತ್ನದ ಗರಿ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ದುರ್ಮರಣ..!

ಬೆಂಗಳೂರು : ನಗರದಲ್ಲಿ ಸೆ.6ರ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್(32) ಅಪಘಾತದಲ್ಲಿ ಮೃತನಾದ

Live Cricket

Add Your Heading Text Here