ಬೀದರ್ : ಲೋಕಸಭೆ ಚುನಾವಣೆಯ ದಿನಾಂಕ ನಿಗದಿಯಾಗಿದ್ದು, ಏ.26 ಮತ್ತು ಮೇ.7ಕ್ಕೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಿಂದಾಗಿ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪುತ್ರ ಸಾಗರ ಖಂಡ್ರೆಗೆ ಕಾಂಗ್ರೆಸ್ ಟಿಕೆಟ್ ಫೈನಲ್ ಆಗಿದೆ.
ಕಾಂಗ್ರೆಸ್ ಟಿಕೆಟ್ ರೇಸ್ನಲ್ಲಿ ಹುಮಾನಾಬಾದ್ ಮಾಜಿ ಸಚಿವ ರಾಜಶೇಖರ ಪಾಟೀಲ ಹಾಗೂ ಸಾಗರ್ ಖಂಡ್ರೆ ಮಧ್ಯೆ ಟಿಕೆಟ್ ಅಂತಿಮ ಕ್ಷಣದವರೆಗೂ ಭಾರೀ ಪೈಪೋಟಿ ನಡೆದಿತ್ತು. ಕೊನೆಗೆ ಸಚಿವ ಈಶ್ವರ ಖಂಡ್ರೆ ಪುತ್ರ ಸಾಗರ ಖಂಡ್ರೆಗೆ ಹೈಕಮಾಂಡ್ ಮಣೆ ಹಾಕಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ : ಸ್ವಾರ್ಥಕ್ಕಾಗಿ ಪಕ್ಷವನ್ನೇ ತಮ್ಮ ಕುಟುಂಬ ಮಾಡಿಕೊಳ್ಳಲು ಹೊರಟಿದ್ದಾರೆ : ಬಿಎಸ್ವೈ ವಿರುದ್ಧ ಡಿವಿಎಸ್ ವಾಗ್ದಾಳಿ..!
Post Views: 82