Download Our App

Follow us

Home » ಸಿನಿಮಾ » ಸಂಯುಕ್ತ ಹೆಗಡೆ ಅಭಿನಯದ ‘ಕ್ರೀಂ’ ಸಿನಿಮಾದ ಟ್ರೇಲರ್ ರಿಲೀಸ್..!

ಸಂಯುಕ್ತ ಹೆಗಡೆ ಅಭಿನಯದ ‘ಕ್ರೀಂ’ ಸಿನಿಮಾದ ಟ್ರೇಲರ್ ರಿಲೀಸ್..!

“ಕಿರಿಕ್ ಪಾರ್ಟಿ” ಚಿತ್ರದ ಖ್ಯಾತಿಯ ನಟಿ ಸಂಯುಕ್ತ ಹೆಗಡೆ ನಾಯಕಿಯಾಗಿ ನಟಿಸಿರುವ “ಕ್ರೀಂ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಚಿತ್ರ ಮಾರ್ಚ್ ಒಂದರಂದು ಬಿಡುಗಡೆಯಾಗಲಿದೆ. ಖ್ಯಾತ ಲೇಖಕ ಅಗ್ನಿ ಶ್ರೀಧರ್ ಅವರಿಂದ ಈ ಚಿತ್ರದ ಟ್ರೇಲರ್ ಅನಾವರಣವಾಯಿತು.

ಡಿ.ಕೆ.ದೇವೇಂದ್ರ ಅವರು ನಿರ್ಮಿಸಿರುವ ಈ ಚಿತ್ರವನ್ನು ಅಭಿಷೇಕ್ ಬಸಂತ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಅಗ್ನಿ ಶ್ರೀಧರ್ ಅವರು ಬರೆದಿದ್ದಾರೆ. ಈ ಚಿತ್ರದ ಪ್ರಮುಖಪಾತ್ರದಲ್ಲೂ ಅಗ್ನಿ ಶ್ರೀಧರ್ ನಟಿಸಿಸಿದ್ದಾರೆ.

ನನಗೆ ಬರವಣಿಗೆಯಲ್ಲಿ ಹೆಚ್ಚು ಆಸಕ್ತಿ. ನಟನೆಯಲ್ಲಿ ನನಗೆ ಆಸಕ್ತಿ ಇರಲಿಲ್ಲ ಎಂದು ಮಾತು ಆರಂಭಿಸಿದ ಅಗ್ನಿ ಶ್ರೀಧರ್, ನಿರ್ಮಾಪಕ ದೇವೇಂದ್ರ ಅವರು ನನ್ನನ್ನು ಈ ಪಾತ್ರ ನಿರ್ವಹಣೆ ಮಾಡಲು ಹೆಚ್ಚು ಒತ್ತಾಯಿಸಿದರು. ನಾನು ಆಗಲ್ಲ ಎಂದು ಹೇಳಿದೆ. ನಿರ್ಮಾಪಕರು ಹಾಗೂ ನನ್ನ ಹತ್ತಿರದವರ ಒತ್ತಾಯಕ್ಕೆ ನಾನು ನಟಿಸಲು ಒಪ್ಪಿಕೊಂಡೆ. ಈ ವಿಷಯವನ್ನು ಚಿತ್ರ ಬಿಡುಗಡೆಯಾಗುವವರೆಗೂ ಗೌಪ್ಯವಾಗಿಡೋಣ ಅಂತ ಹೇಳಿದ್ದೆ. ಆದರೆ ನಿರ್ಮಾಪಕರು ಟ್ರೇಲರ್ ನಲ್ಲೇ ನನ್ನನ್ನು ತೋರಿಸಿಬಿಟ್ಟಿದ್ದಾರೆ.

ಇನ್ನು “ಕ್ರೀಂ” ಎಂದರೆ ಬೀಜಾಕ್ಷರ ಮಂತ್ರ. ಈ ಚಿತ್ರದ ಕಥೆ ಹಣ ಹಾಗೂ ಅಧಿಕಾರಕ್ಕಾಗಿ ನಡೆಯುವ ಹೆಣ್ಣುಮಕ್ಕಳ ಬಲಿಯನ್ನು ಕುರಿತಾದ ಕಥಾಹಂದರ ಹೊಂದಿದೆ. ಈಗಲೂ ಕೂಡ ನಮ್ಮ ಊರು, ನಮ್ಮ ದೇಶ ಹಾಗೂ ವಿದೇಶಗಳಲ್ಲೂ ಈ ಕೃತ್ಯ ನಡೆಯುತ್ತಲೇ ಇದೆ. ಇಂತಹ ಸೂಕ್ಷ್ಮ ವಿಚಾರವನ್ನು ಈ ಚಿತ್ರದ ಮೂಲಕ ತೋರಿಸಲಾಗಿದೆ.‌ ಅಭಿಷೇಕ್ ಬಸಂತ್ ಸೇರಿದಂತೆ ಎಲ್ಲಾ ತಂತ್ರಜ್ಞರ ಕಾರ್ಯವೈಖರಿ ಹಾಗೂ ಸಂಯುಕ್ತ ಹೆಗಡೆ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ ಎಂದರು.

ನಾನು ಸಮಯಕ್ಕೆ ಹೆಚ್ಚು ಬೆಲೆ ಕೊಡುತ್ತೇನೆ. ಹಾಗಾಗಿ ಎಲ್ಲಾ ಕಲಾವಿದರ ಸಹಕಾರದಿಂದ ಚಿತ್ರೀಕರಣ ನಿಗದಿಯಂತೆ ಮುಕ್ತಾಯವಾಯಿತು. ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರವನ್ನು ನನ್ನ ಮೊದಲ ನಿರ್ದೇಶನ ಮಾಡಬೇಕೆಂಬ ಆಸೆಯಿತ್ತು‌.‌ ಅಗ್ನಿ ಶ್ರೀಧರ್ ಅವರ ಈ ಕಥೆ ಬಹಳ ಇಷ್ಟವಾಯಿತು. ನನ್ನ ಮೊದಲ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದರು ನಿರ್ದೇಶಕ ಅಭಿಷೇಕ್ ಬಸಂತ್. ಐದು ವರ್ಷಗಳ ನಂತರ ನಾನು ನಟಿಸಿರುವ ಕನ್ನಡ ಸಿನಿಮಾ ಇದು. ನಾನು ಈವರೆಗೂ ಮಾಡಿರದ ಪಾತ್ರವಿದು. ಆಕ್ಷನ್ ಕೂಡ ಮಾಡಿದ್ದೇನೆ ಎಂದು ಸಂಯುಕ್ತ ಹೆಗಡೆ ತಿಳಿಸಿದರು.

ನಮ್ಮ ಚಿತ್ರದಲ್ಲಿ ನಟಿಸಬೇಕಿದ್ದ ಖಳನಟರೊಬ್ಬರು ಕಾರಣಾಂತರದಿಂದ ನಟಿಸಲು ಆಗಲ್ಲ ಎಂದಾಗ ನಾನು ಹಾಗೂ ನಿರ್ದೇಶಕರು ಬಹಳ ಒತ್ತಡದಲ್ಲಿದ್ದೆವು. ಆಗ ನನಗೆ ಈ ಪಾತ್ರವನ್ನು ಅಗ್ನಿ ಶ್ರೀಧರ್ ಅವರು ಮಾಡಿದರೆ ಚೆನ್ನಾಗಿರುತ್ತದೆ ಎಂದು ಅನಿಸಿತು. ಅವರ ಬಳಿ ನೀವೇ ಈ ಪಾತ್ರ ಮಾಡಬೇಕು ಎಂದು ಹೇಳಿದಾಗ ಅವರು ಒಪ್ಪಲಿಲ್ಲ.‌ ನಂತರ ಬಹಳ ಕಷ್ಟಪಟ್ಟು ಅವರನ್ನು ಒಪ್ಪಿಸಿದ್ದೆವು. ಚಿತ್ರತಂಡದ ಸಹಕಾರದಿಂದ “ಕ್ರೀಂ” ಚಿತ್ರ ಚೆನ್ನಾಗಿ ಬಂದಿದೆ. ಇದೇ ಮಾರ್ಚ್ ಒಂದರಂದು ಬಿಡುಗಡೆಯಾಗುತ್ತಿದೆ ಎಂದರು ನಿರ್ಮಾಪಕ ದೇವೇಂದ್ರ.

ಇದನ್ನೂ ಓದಿ : ಲೈಸೆನ್ಸ್ ಇಲ್ಲದೆ ಕಾರ್ಖಾನೆ – ಎಂಎಲ್ಎ ಯತ್ನಾಳ್ ಗೆ ನೋಟಿಸ್

Leave a Comment

DG Ad

RELATED LATEST NEWS

Top Headlines

ಗೌರಿ ಹಬ್ಬದಂದು ಗಣೇಶನ ಸನ್ನಿಧಿಯಲ್ಲಿ ಝೈದ್ ಖಾನ್ ಅಭಿನಯದ ‘ಕಲ್ಟ್’ ಚಿತ್ರಕ್ಕೆ ಚಾಲನೆ..!

“ಬನಾರಸ್” ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಈ ವರ್ಷದ ಭರ್ಜರಿ ಹಿಟ್ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರದ

Live Cricket

Add Your Heading Text Here