Download Our App

Follow us

Home » ರಾಜಕೀಯ » ಲಕ್ಷ್ಮಣ್ ಸವದಿ ಪ್ರಜ್ಞಾವಂತ ಮನುಷ್ಯ, ಮತ್ತೆ ಬಿಜೆಪಿಗೆ ಹೋಗೋದಿಲ್ಲ – ಡಿಕೆ ಶಿವಕುಮಾರ್..!

ಲಕ್ಷ್ಮಣ್ ಸವದಿ ಪ್ರಜ್ಞಾವಂತ ಮನುಷ್ಯ, ಮತ್ತೆ ಬಿಜೆಪಿಗೆ ಹೋಗೋದಿಲ್ಲ – ಡಿಕೆ ಶಿವಕುಮಾರ್..!

ಬೆಂಗಳೂರು : ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದ ಜಗದೀಶ್ ಶೆಟ್ಟರ್ ಅವರು ಮರಳಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಬಿಜೆಪಿಯ ಸೈಲೆಂಟ್ ಆಪರೇಷನ್ ಯಶಸ್ವಿಯಾಗಿದೆ. ಈ ಬೆಳವಣಿಗೆ ಕಾಂಗ್ರೆಸ್ ಪಕ್ಷಕ್ಕೆ ಬಹು ದೊಡ್ಡ ಶಾಕ್ ನೀಡಿದೆ. ಈ ಬೆನ್ನಲ್ಲೇ ಬಿಜೆಪಿಯಿಂದ ಕಾಂಗ್ರೆಸ್ ಬಂದಿದ್ದ ಮತ್ತೊಬ್ಬ ನಾಯಕ, ಅಥಣಿ ಶಾಸಕ ಲಕ್ಷ್ಮಣ್ ಸವದಿಯವರನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಕ್ಷಣವೇ ನಿನ್ನೆ ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಈ ಕುರಿತು ಇಂದು ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಯಾರೂ ಕಾಂಗ್ರೆಸ್​ ಬಿಟ್ಟು ಹೋಗೋದಿಲ್ಲ. ಲಕ್ಷ್ಮಣ್ ಸವದಿ ಪ್ರಜ್ಞಾವಂತ ಮನುಷ್ಯ.
ಅವರು ಮತ್ತೆ ಬಿಜೆಪಿಗೆ ಹೋಗೋದಿಲ್ಲ. ಈಗಾಗಲೇ ಅವರ ಜತೆ ನಾನು ಮಾತ್ನಾಡಿದ್ದೇನೆ ಎಂದು ಹೇಳಿದ್ದಾರೆ.

ಯಾರು ಬಂದರೋ ಅವರನ್ನು ಸೇರಿಸಿಕೊಂಡಿದ್ದೇವೆ. ಅವರಿಗೂ ಅರಿವಿದೆ, ಅನುಭವ ಆಗಿದೆ. ಎಲ್ಲದಕ್ಕೂ ಕಾಲವೇ ಉತ್ತರ ನೀಡಲಿದೆ
ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿದ್ದಾರೆ.

ಲಿಂಗಾಯತ ಸಮುದಾಯಕ್ಕೆ ಸೇರಿದ ಬಿಜೆಪಿ ನಾಯಕರಲ್ಲಿ ಸವದಿ ಕೂಡ ಒಬ್ಬರಾಗಿದ್ದರು. ಮೇ 10 ರ ವಿಧಾನಸಭಾ ಚುನಾವಣೆಗೂ ಮುನ್ನವೇ ಸವದಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ವಿಧಾನಸಭೆ ಬಿಜೆಪಿ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್‌ ಸೇರಿದ್ದರು. ನಂತರ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಅಥಣಿ ಕ್ಷೇತ್ರದಲ್ಲಿ ಭಾರಿ ಅಂತರದಿಂದ ಜಯಗಳಿಸಿದ್ದರು.

ಇದನ್ನೂ ಓದಿ : ನಮ್ಮ ಮೆಟ್ರೋ ಪ್ರಯಾಣಿಕರ ಗಮನಕ್ಕೆ.. ಇಂದಿನಿಂದ ಮೂರು ದಿನ ಈ ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರ ಸ್ಥಗಿತ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here