ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬೆಳ್ಳಂಬೆಳಗ್ಗೆ ರಾಜ್ಯದ ಹಲವೆಡೆ ದಾಳಿ ಮಾಡಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಹತ್ವದ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. ತೀವ್ರ ವಿಚಾರಣೆ ನಡೆಸಿದ ED ಅಧಿಕಾರಿಗಳು ಈಗಾಗಲೇ ಈ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರ ಆಪ್ತ ಹರೀಶ್ನ್ನೂ ಅರೆಸ್ಟ್ ಮಾಡಿದ್ದಾರೆ.
ಈ ಬೆಳವಣಿಗೆ ಬೆನ್ನಲ್ಲೇ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಮೀಸಲಾಗಿದ್ದ ನಿಧಿಗಳನ್ನು ಬೇರೆ ಉದ್ದೇಶಕ್ಕೆ ಬಳಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ವಾಲ್ಮೀಕಿ 187 ಕೋಟಿ ನುಂಗಿದ ಸಿದ್ದರಾಮಯ್ಯ ಸರ್ಕಾರಕ್ಕೆ ದಲಿತರು ಮತ್ತು ಶೋಷಿತರ ಅಭಿವೃದ್ಧಿಗಾಗಿ ಮೀಸಲಿಟ್ಟ 14 ಸಾವಿರ ಕೋಟಿ ಗ್ಯಾರಂಟಿಗಳಿಗೆ ವರ್ಗಾಯಿಸುವ ವಿರುದ್ದ ಕೇಂದ್ರ SC/ST ಆಯೋಗದಿಂದ ಸುಮೋಟೊ ಕೇಸ್ ದಾಖಲಾಗಿದೆ.
ಸುಮೋಟೊ ಕೇಸ್ ದಾಖಲಿಸಿರುವ ಆಯೋಗ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ವಿವರಣೆ ಕೇಳಿದೆ. 7 ದಿನಗಳ ಒಳಗಾಗಿ ಸಂಪೂರ್ಣ ವರದಿ ನೀಡುವಂತೆ ಪತ್ರದಲ್ಲಿ ಸೂಚನೆ ನೀಡಲಾಗಿದೆ. ಅಲ್ಲದೇ ಇದನ್ನು ಅತ್ಯಂತ ತುರ್ತು ಎಂದು ಪರಿಗಣಿಸಬೇಕೆಂದು ಆಯೋಗ ತನ್ನ ಪತ್ರದಲ್ಲಿ ಉಲ್ಲೇಖಿಸಿದೆ.
ಇದನ್ನೂ ಓದಿ : ನೆಲಮಂಗಲ : ಚಲಿಸುತ್ತಿದ್ದ ಸ್ಕೂಟರ್ನಲ್ಲಿ ಕಾಣಿಸಿಕೊಂಡ ಬೆಂಕಿ – ನೋಡ ನೋಡ್ತಿದ್ದಂತೆ ರಸ್ತೆ ಮಧ್ಯೆ ಧಗಧಗನೆ ಹೊತ್ತಿ ಉರಿದ ಸ್ಕೂಟರ್..!