ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ನ ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್ನಿಂದ STI ಅಧಿಕಾರಿಗಳು 45 ಕೋಟಿ ರೂಪಾಯಿ ಸೀಜ್ ಮಾಡಿದ್ದಾರೆ.
ಈಗಾಗಲೇ ಈ ಪ್ರಕರಣದಲ್ಲಿ ನಿಗಮದ MD ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್, ಸಚಿವರ ಆಪ್ತರಾದ ನೆಕ್ಕುಂಟಿ ನಾಗರಾಜ್, ನಾಗೇಶ್ವರ ರಾವ್ನನ್ನು SIT ಟೀಂ ಬಂಧಿಸಿದೆ. ಇದರೊಂದಿಗೆ 18 ನಕಲಿ ಖಾತೆಗಳ ಸೃಷ್ಟಿಸಿ ಹಣ ವರ್ಗಾವಣೆ ಮಾಡಿದ ಆರೋಪದಲ್ಲಿ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿರುವ ಸತ್ಯನಾರಾಯಣ ಇಟಕಾರಿಯನ್ನೂ ಕೂಡ ಪೊಲೀಸರು ಬಂಧಿಸಿದ್ದಾರೆ.
ಇನ್ನೂ ಇದೇ ಬ್ಯಾಂಕ್ನ 18 ನಕಲಿ ಖಾತೆಗಳಿಗೆ ನಿಗಮದಿಂದ 94.73 ಕೋಟಿ ವರ್ಗಾವಣೆಯಾಗಿತ್ತು. ಈ ಹಣದ ಪೈಕಿ ಬಹುಪಾಲು ಹಣ ಡ್ರಾ ಆಗಿರುವ ಮಾಹಿತಿಯಿದ್ದು, ಉಳಿದ ಹಣ ಎಲ್ಲಿಗೆ ಹೋಗಿದೆ ಎಂಬ ಕುರಿತು SIT ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಎರಡೇ ತಿಂಗಳಲ್ಲಿ ಮತ್ತೊಂದು ಮಹಾಯುದ್ಧ – ಚನ್ನಪಟ್ಟಣ ಉಪಚುನಾವಣೆಗೆ ನಿಖಿಲ್ vs ಡಿಕೆ ಸುರೇಶ್ ಎದುರಾಳಿಗಳು?