Download Our App

Follow us

Home » ಅಪರಾಧ » ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ​​: SITಯಿಂದ ಇಬ್ಬರು ಅಧಿಕಾರಿಗಳ ಅರೆಸ್ಟ್..!

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ​​: SITಯಿಂದ ಇಬ್ಬರು ಅಧಿಕಾರಿಗಳ ಅರೆಸ್ಟ್..!

ಬೆಂಗಳೂರು : ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ  SIT ಅಧಿಕಾರಿಗಳು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ MDಯಾಗಿದ್ದ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿಯಾಗಿದ್ದ ಪರಶುರಾಮ್​​ ದುರಗಣ್ಣನವರ್​ ಬಂಧಿತರು.

ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇಬ್ಬರನ್ನೂ ಸಸ್ಪೆಂಡ್ ಮಾಡಿತ್ತು. ಇದಾದ ಬಳಿಕ ಸೂಕ್ತ ವಿಚಾರಣೆ ನಡೆಸಲು ರಾಜ್ಯ ಸರ್ಕಾರದಿಂದ ವಿಶೇಷ ತನಿಖಾ ತಂಡ (SIT) ರಚಿಸಿ ಆದೇಶ ಹೊರಡಿಸಲಾಗಿತ್ತು. ಟೀಂ ರಚನೆ ಮಾಡುತ್ತಿದ್ದಂತೆಯೇ ತನಿಖೆಗೆ ಎಂಟ್ರಿ SIT ಅಧಿಕಾರಿಗಳು ನಿನ್ನೆ ರಾತ್ರಿಯೇ  ಇಬ್ಬರೂ ಅಧಿಕಾರಿಗಳನ್ನು ಬೆಂಗಳೂರು ಹೊರವಲಯದಲ್ಲಿ ಬಂಧಿಸಿದ್ದಾರೆ.

SIT ಅಧಿಕಾರಿಗಳು ಇಂದು ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿಯಾಗಿದ್ದ ಪರಶುರಾಮ್​​ ದುರಗಣ್ಣನವರ್ ಕೋರ್ಟ್​ ಮುಂದೆ ಹಾಜರು ಪಡಿಸಲಿದ್ದಾರೆ. ಕೋರ್ಟ್​ ಮುಂದೆ ಹಾಜರು ಪಡಿಸಿದ ಬಳಿಕ  ಇಬ್ಬರೂ ಅಧಿಕಾರಿಗಳನ್ನು SIT ಕಸ್ಟಡಿಗೆ ಕೇಳಲಿದೆ.

ಇದನ್ನೂ ಓದಿ : ಸಂತ್ರಸ್ತೆ ಕಿಡ್ನ್ಯಾಪ್​​ ಪ್ರಕರಣ : ಭವಾನಿ ರೇವಣ್ಣ ಕಾರು ಡ್ರೈವರ್ ಅರೆಸ್ಟ್​​..!

Leave a Comment

DG Ad

RELATED LATEST NEWS

Top Headlines

ಬಿಗ್ ಬಾಸ್ ವೇದಿಕೆಯಲ್ಲಿ ಸಲ್ಮಾನ್ ಖಾನ್‌ಗೆ ಮದುವೆ ಪ್ರಪೋಸಲ್ ಇಟ್ಟ ನಟಿ..!

ಬಿಗ್ ಬಾಸ್, ಅತ್ಯಂತ ಜನಪ್ರಿಯ ಕಾರ್ಯಕ್ರಮ. ಹಿಂದಿಯಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಅನ್ನು ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ನಡೆಸಿಕೊಡುತ್ತಿದ್ದಾರೆ. ಇದೀಗ ಬಿಗ್ ಬಾಸ್ ವೇದಿಕೆಯಲ್ಲಿ

Live Cricket

Add Your Heading Text Here