ಬೆಂಗಳೂರು : ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ SIT ಅಧಿಕಾರಿಗಳು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ MDಯಾಗಿದ್ದ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿಯಾಗಿದ್ದ ಪರಶುರಾಮ್ ದುರಗಣ್ಣನವರ್ ಬಂಧಿತರು.
ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇಬ್ಬರನ್ನೂ ಸಸ್ಪೆಂಡ್ ಮಾಡಿತ್ತು. ಇದಾದ ಬಳಿಕ ಸೂಕ್ತ ವಿಚಾರಣೆ ನಡೆಸಲು ರಾಜ್ಯ ಸರ್ಕಾರದಿಂದ ವಿಶೇಷ ತನಿಖಾ ತಂಡ (SIT) ರಚಿಸಿ ಆದೇಶ ಹೊರಡಿಸಲಾಗಿತ್ತು. ಟೀಂ ರಚನೆ ಮಾಡುತ್ತಿದ್ದಂತೆಯೇ ತನಿಖೆಗೆ ಎಂಟ್ರಿ SIT ಅಧಿಕಾರಿಗಳು ನಿನ್ನೆ ರಾತ್ರಿಯೇ ಇಬ್ಬರೂ ಅಧಿಕಾರಿಗಳನ್ನು ಬೆಂಗಳೂರು ಹೊರವಲಯದಲ್ಲಿ ಬಂಧಿಸಿದ್ದಾರೆ.
SIT ಅಧಿಕಾರಿಗಳು ಇಂದು ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿಯಾಗಿದ್ದ ಪರಶುರಾಮ್ ದುರಗಣ್ಣನವರ್ ಕೋರ್ಟ್ ಮುಂದೆ ಹಾಜರು ಪಡಿಸಲಿದ್ದಾರೆ. ಕೋರ್ಟ್ ಮುಂದೆ ಹಾಜರು ಪಡಿಸಿದ ಬಳಿಕ ಇಬ್ಬರೂ ಅಧಿಕಾರಿಗಳನ್ನು SIT ಕಸ್ಟಡಿಗೆ ಕೇಳಲಿದೆ.
ಇದನ್ನೂ ಓದಿ : ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣ : ಭವಾನಿ ರೇವಣ್ಣ ಕಾರು ಡ್ರೈವರ್ ಅರೆಸ್ಟ್..!