Download Our App

Follow us

Home » ರಾಜಕೀಯ » ಎರಡ್ಮೂರು ದಿನಗಳಲ್ಲಿ ಆಕಾಂಕ್ಷಿಗಳ ಹೆಸರನ್ನು ಹೈಕಮಾಂಡ್​ಗೆ ಕಳಿಸುತ್ತೇವೆ : ಬಿ.ವೈ ವಿಜಯೇಂದ್ರ..!

ಎರಡ್ಮೂರು ದಿನಗಳಲ್ಲಿ ಆಕಾಂಕ್ಷಿಗಳ ಹೆಸರನ್ನು ಹೈಕಮಾಂಡ್​ಗೆ ಕಳಿಸುತ್ತೇವೆ : ಬಿ.ವೈ ವಿಜಯೇಂದ್ರ..!

ಬೆಂಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಿಂದಾಗಿ ರಾಜ್ಯ ಬಿಜೆಪಿ ನಾಯಕರು ನಿನ್ನೆ ಸಭೆ ನಡೆಸಿ 28 ಕ್ಷೇತ್ರಗಳ ಸಂಭವನೀಯ ಪಟ್ಟಿ ಫೈನಲ್​ ಮಾಡಿದ್ದಾರೆ. ಇನ್ನೆರಡು ದಿನಗಳಲ್ಲಿ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ರವಾನಿಸಲಿದ್ದಾರೆ. ಸಭೆಯಲ್ಲಿ ಮಾಜಿ ಸಿಎಂಗಳಾದ ಬಿಎಸ್​ವೈ, ಸದಾನಂದಗೌಡ, ಬಸವರಾಜ ಬೊಮ್ಮಾಯಿ, ಬಿ.ವೈ.ವಿಜಯೇಂದ್ರ, ಆರ್​​.ಅಶೋಕ್​ ಭಾಗಿಯಾಗಿದ್ದರು.

ಈ ಬಗ್ಗೆ ಸಭೆ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ರಾಜ್ಯದಲ್ಲಿ 28ಕ್ಕೆ 28 ಕ್ಷೇತ್ರಗಳನ್ನು ಗೆಲ್ಲುತ್ತೇವೆ, ಇಂದಿನ ಸಭೆಯಲ್ಲಿ ಅಭ್ಯರ್ಥಿಗಳ ಹೆಸರು ಚರ್ಚೆಯಾಗಿದೆ. ವೀಕ್ಷಕರು ಕೊಟ್ಟ ಹೆಸರು ಇಂದಿನ ಸಭೆಯಲ್ಲಿ ಚರ್ಚಿಸಿದ್ದೇವೆ, ಎರಡ್ಮೂರು ದಿನಗಳಲ್ಲಿ ಹೈಕಮಾಂಡ್​ಗೆ ಹೆಸರು ಕಳುಹಿಸುತ್ತೇವೆ, ಅಕಾಂಕ್ಷಿಗಳ ಹೆಸರುಗಳನ್ನು ಕಳುಹಿಸುವುದು ನಮ್ಮ ಕರ್ತವ್ಯ ಎಂದು ಹೇಳಿದ್ದಾರೆ.

ಕಳೆದ ಎರಡು-ಮೂರು ದಿನಗಳಿಂದ ಎಲ್ಲಾ ಲೋಕಸಭಾ ಕ್ಷೇತ್ರಕ್ಕೆ ಇಬ್ಬರು ವೀಕ್ಷಕರು ಕಳುಹಿಸಿದ್ದೇವೆ. ಅವರು ಕೊಟ್ಟಿರುವ ಹೆಸರನ್ನು ಇಂದಿನ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ, ಚರ್ಚೆ ಆಗಿರುವ ಎಲ್ಲಾ ಹೆಸರುಗಳನ್ನು ದೆಹಲಿ ವರಿಷ್ಠರಿಗೆ ಕಳುಹಿಸಿಕೊಡುತ್ತೇವೆ. ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿ ಚುನಾವಣೆ ಎದುರಿಸುತ್ತೇವೆ. ಎಲ್ಲಾ 28 ಕ್ಷೇತ್ರ ಗೆಲ್ಲುವ ಮುಖೇನ ಹೊಸ ದಾಖಲೆ ನಿರ್ಮಾಣ ಮಾಡುತ್ತೇವೆ ಎಂದು ಹೇಳಿದ್ಧಾರೆ.

ಇದನ್ನೂ ಓದಿ : ರಾಮೇಶ್ವರಂ ಕೆಫೆ ಪ್ರಕರಣವನ್ನು ಕಾಂಗ್ರೆಸ್ ತಿರುಚುವ ಕೆಲಸ ಮಾಡುತ್ತಿದೆ – ಆರ್​.ಅಶೋಕ್​​ ಗಂಭೀರ ಆರೋಪ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here