Download Our App

Follow us

Home » ಸಿನಿಮಾ » ಸೌದತ್ತಿ ಎಲ್ಲಮ್ಮ ದೇವಿಯ ದರ್ಶನ ಪಡೆದ ಶಿವಣ್ಣ..!

ಸೌದತ್ತಿ ಎಲ್ಲಮ್ಮ ದೇವಿಯ ದರ್ಶನ ಪಡೆದ ಶಿವಣ್ಣ..!

ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್ ಸೌದತ್ತಿ ಎಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಬೆಳಗಾವಿಯಲ್ಲಿ “ಉತ್ತರಕಾಂಡ” ಚಿತ್ರದ ಚಿತ್ರೀಕರಣವನ್ನು ಮುಗಿಸಿಕೊಂಡು ದೇವಿಯ ದರ್ಶನ ಪಡೆದ ಶಿವಣ್ಣನಿಗೆ ಈ ಕ್ಷೇತ್ರ ಅದೃಷ್ಟವಂತೆ. ಹಿಂದೆ “ಶ್ರೀರಾಮ್”, “ಮೈಲಾರಿ” ಮುಂತಾದ ಬ್ಲಾಕ್ ಬಸ್ಟರ್ ಚಿತ್ರಗಳ ಪಾಲಿಗೂ ಸೌದತ್ತಿ ಎಲ್ಲಮ್ಮ ಅದೃಷ್ಟ ದೇವತೆ. ಹಾಗಾಗಿ “ಉತ್ತರಕಾಂಡ‌”ದ ಚಿತ್ರೀಕರಣದ ನಂತರ ಶಿವಣ್ಣ ತಾಯಿ‌ ಆಶಿರ್ವಾದವನ್ನು ಪಡೆದಿದ್ದಾರೆ.

ಕೆ.ಆರ್.ಜಿ. ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸಿರುವ “ಉತ್ತರಕಾಂಡ” ರೋಹಿತ್ ಪದಕಿ ನಿರ್ದೇಶನದ ಬಹು ನಿರೀಕ್ಷಿತ ಆಕ್ಷನ್ ಡ್ರಾಮಾ ಚಿತ್ರವಾಗಿದೆ. ಈ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಡಾ ಶಿವರಾಜ್ ಕುಮಾರ್, ನಟರಾಕ್ಷಸ ಡಾಲಿ‌ ಧನಂಜಯ, ಐಶ್ವರ್ಯ ರಾಜೇಶ್, ಭಾವನಾ‌ ಮೆನನ್, ದಿಗಂತ್ ಮಂಚಾಲೆ, ರಂಗಾಯಣ ರಘು, ವಿಜಯ್ ಬಾಬು ಮುಂತಾದವರು ನಟಿಸಿದ್ದಾರೆ.

ಚಿತ್ರಕ್ಕೆ ಬಾಲಿವುಡ್ ಹೆಸರಾಂತ ಗಾಯಕ, ಸಂಗೀತ ಸಂಯೋಜಕ ಅಮಿತ್ ತ್ರಿವೇದಿ ಸಂಗೀತ ಸಂಯೋಜನೆ ಮಾಡಿದ್ದು, ಅದ್ವೈತ ಗುರುಮೂರ್ತಿ ಸಿನಿಮಾದ ಮುಖ್ಯ ಛಾಯಾಗ್ರಹಣದ ಕಾರ್ಯ ನಿರ್ವಹಿಸಿದ್ದಾರೆ.

ಇದನ್ನೂ ಓದಿ : ಅಮೆಜಾನ್ ಪ್ರೈಮ್​ನಲ್ಲಿ “ಶಾಖಾಹಾರಿ” ಅಬ್ಬರ – 4 ದಿನದಲ್ಲಿ 10 ಮಿಲಿಯನ್ ನಿಮಿಷ ಸ್ಟ್ರೀಮಿಂಗ್ ಕಂಡ ಸಿನಿಮಾ..!

 

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here