ಬೆಂಗಳೂರು : ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯುಸಿನೆಸ್ ಪಾರ್ಟನರ್ಸ್ ಮೇಲೆ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜಗದೀಶ್ ವ್ಯವಹಾರಿಕ ಪಾಲುದಾರರಾದ ಸುರೇಶ್, ಹೊಂಬಣ್ಣ ಹಾಗೂ ಸುಧೀಂದ್ರ ಎಂಬುವರ ಮೇಲೆ FIR ದಾಖಲಾಗಿದೆ.
ಈ ಆತ್ಮಹತ್ಯೆ ಪ್ರಕರಣ ಸಂಬಂಧಿಸಿದಂತೆ ನಿರ್ಮಾಪಕ ಸೌಂದರ್ಯ ಜಗದೀಶ್ ಮನೆಯಲ್ಲಿ ಕೆಲವೇ ಸಾಲುಗಳು ಬರೆದಿದ್ದ ಡೆತ್ ನೋಟ್ ಪತ್ತೆಯಾಗಿದೆ. ಪತ್ತೆಯಾದ ಡೆತ್ ನೋಟ್ನಲ್ಲಿ ಸೌಂದರ್ಯ ಕನ್ಸ್ಟ್ರಕ್ಷನ್ ಸಂಬಂಧ ಬ್ಯುಸಿನೆಸ್ ಲಾಸ್ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬ್ಯುಸಿನೆಸ್ನಲ್ಲಿ ಸುಮಾರು 60 ಕೋಟಿ ನಷ್ಟವಾಗಿರುವ ಬಗ್ಗೆ ಉಲ್ಲೇಖವಿದ್ದು, ವ್ಯವಹಾರಿಕ ಪಾಲುದಾರರು ಕಾರಣ ಎಂದು ಡೆತ್ ನೋಟ್ನಲ್ಲಿ ಪತ್ತೆಯಾಗಿದೆ. ಇದೀಗ ಈ ಡೆತ್ ನೋಟ್ ಆಧರಿಸಿ ಪತ್ನಿ ಶಶಿರೇಖಾ ಮಹಾಲಕ್ಷ್ಮಿ ಪೊಲೀಸ್ ಠಾಣೆ ದೂರು ನೀಡಿದ್ದಾರೆ. ಸದ್ಯ ದೂರಿನ ಮೇರೆಗೆ ಪೊಲೀಸರು ಬ್ಯುಸಿನೆಸ್ ಪಾರ್ಟನರ್ಸ್ ಮೇಲೆ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ : ವಕೀಲೆ ಚೈತ್ರಾ ಗೌಡ ನಿಗೂಢ ಸಾ*ವು ಪ್ರಕರಣ – ಪೊಲೀಸರ ತನಿಖೆಯಲ್ಲಿ ಸಾವಿನ ರಹಸ್ಯ ಬಯಲು..!