Download Our App

Follow us

Home » ಜಿಲ್ಲೆ » ಬಾಗಲಕೋಟೆಯಲ್ಲಿ ರಂಭಾಪುರಿ ಶ್ರೀಗಳ ಕಾರ್​​​ ಮೇಲೆ ಚಪ್ಪಲಿ ಎಸೆತ..!

ಬಾಗಲಕೋಟೆಯಲ್ಲಿ ರಂಭಾಪುರಿ ಶ್ರೀಗಳ ಕಾರ್​​​ ಮೇಲೆ ಚಪ್ಪಲಿ ಎಸೆತ..!

ಬಾಗಲಕೋಟೆ : ರಂಭಾಪುರಿ ಶ್ರೀಗಳ ಕಾರ್​​​ ಮೇಲೆ ಚಪ್ಪಲಿ ಎಸೆದ ಘಟನೆ ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದಲ್ಲಿ ನಡೆದಿದೆ. ರಂಭಾಪುರಿಶ್ರೀ ಕಲಾದಗಿ ಮಠದ ಉತ್ತರಾಧಿಕಾರಿಯಾಗಿ ಕೆ.ಎಂ.ಗಂಗಾಧರ ಸ್ವಾಮೀಜಿಯನ್ನು ಆಯ್ಕೆ ಮಾಡಿದ್ದರು. ಇದನ್ನು ಕಳೆದ ಕೆಲವು ವರ್ಷಗಳ ಹಿಂದೆಯೇ ಗ್ರಾಮದ ಕೆಲವರು ವಿರೋಧಿಸಿದ್ದರು.

ಕಲಾದಗಿ ಮಠದ ವಿಚಾರ ನ್ಯಾಯಾಲಯದಲ್ಲಿದ್ದು, ಕೆಲ ದಿನಗಳ ಹಿಂದೆ ಕೆಲವರು ಶ್ರೀಗಳ ಕಾರ್​ಗೆ ಕಲ್ಲು ಅಡ್ಡ ಇಟ್ಟು ಪ್ರತಿಭಟಿಸಿದ್ದರು. ಇಂದು ರಂಭಾಪುರಿ ಜಗದ್ಗುರುಗಳ ವಿರುದ್ಧ ಕಲಾದಗಿಯಲ್ಲಿ ಮಠದ ಭಕ್ತರು ಪ್ರತಿಭಟನೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ರಂಭಾಪುರಿಶ್ರೀಗಳು ಉದಗಟ್ಟಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಮಾರ್ಗದ ಮಧ್ಯೆ ಚಪ್ಪಲಿ ಎಸೆದಿದ್ದಾರೆ.

ಶ್ರೀಗಳು ಬಾಗಲಕೋಟೆಯಿಂದ ಕಲಾದಗಿ ಮಾರ್ಗವಾಗಿ ಉದಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಈ ವೇಳೆ ಭಕ್ತರು ಶ್ರೀಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ರಂಭಾಪುರಿ ಜಗದ್ಗುರು ಪೀಠದ ಶಾಖಾ ಮಠದ ಗುರುಲಿಂಗೇಶ್ವರ ಮಠ ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದಲ್ಲಿದೆ.

ವಿವಾದ ಕೋರ್ಟ್‌ನಲ್ಲಿರುವಾಗಲೇ ಗಂಗಾಧರ ಸ್ವಾಮೀಜಿ ಮಠದ ದುರಸ್ತಿ ಕಾರ್ಯ ಹಾಗೂ ಮಠದ ಹೊಲ ಉಳುಮೆ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆ ರಂಭಾಪುರಿ ಶ್ರೀ ವಿರುದ್ಧ ಕಲಾದಗಿಯಲ್ಲಿ ಮಠದ ಭಕ್ತರು ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ : ಕಾಂತಾರಾ ಪ್ರೀಕ್ವೆಲ್​​ನಲ್ಲಿ ದೈವಾರಾಧನೆಯ ಪ್ರದರ್ಶನ ಆಗಬಾರದು : ರಿಷಬ್ ಶೆಟ್ಟಿಗೆ ಭಜರಂಗದಳ ಎಚ್ಚರಿಕೆ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here