ಹಾಸನ : ಬಿಜೆಪಿ ನಾಯಕ, ವಕೀಲ ದೇವರಾಜೇಗೌಡ ಅವರ ಆರೋಪದ ಬಳಿಕ ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ದೇವರಾಜೇಗೌಡ ಅವರು ನೇರವಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಶ್ರೇಯಸ್ ಪಟೇಲ್ ವಿರುದ್ಧ ಆರೋಪ ಮಾಡಿದ್ದಾರೆ. ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲ ಸೃಷ್ಟಿಸಿದ ದೇವರಾಜೇಗೌಡ ಅವರ ಹೇಳಿಕೆ ಇದೀಗ ಶ್ರೇಯಸ್ ಪಟೇಲ್ ಪ್ರತಿಕ್ರಿಯಿಸಿ, ದೇವರಾಜೇಗೌಡಗೆ ಬಹಿರಂಗ ಸವಾಲ್ ಎಸೆದಿದ್ದಾರೆ.
ಹಾಸನದಲ್ಲಿ ದಿಢೀರ್ ಸುದ್ದಿಗೋಷ್ಠಿ ನಡೆಸಿ ದೇವರಾಜೇಗೌಡಗೆ ಬಹಿರಂಗ ಸವಾಲ್ ಹಾಕಿದ ಶ್ರೇಯಸ್ ಪಟೇಲ್ ಅವರು, ಪೆನ್ಡ್ರೈವ್ ಕೇಸ್ನಲ್ಲಿ ನನ್ನ ಪಾತ್ರವಿಲ್ಲ. ನಮ್ಮ ನಾಯಕರ ಪಾತ್ರವೂ ಇಲ್ಲ. ನಮ್ಮ ಪಾತ್ರದ ಬಗ್ಗೆ ಸಾಕ್ಷಿ ಕೊಟ್ಟರೆ ರಾಜಕೀಯ ನಿವೃತ್ತಿ ಪಡೆಯುವೆ. ಹಾಸನ ಕ್ಷೇತ್ರದಲ್ಲಿ ಗೆದ್ದರೂ ನನ್ನ ಸ್ಥಾನಕ್ಕೆ ರಾಜೀನಾಮೆ ಕೊಡುವೆ ಎಂದು ನೇರವಾಗಿ ಸಾವಲು ಹಾಕಿದ್ದಾರೆ.
ದೇವರಾಜಗೌಡ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ತಾನು ಬಚಾವ್ ಆಗಲು ಇನ್ನೊಬ್ಬರ ಮೇಲೆ ಆರೋಪವನ್ನು ಹಾಕುತ್ತಿದ್ದಾರೆ. ಹೊಳೆ ನರಸೀಪುರ ಸರ್ಕಲ್ನಲ್ಲಿ ಎಲ್ಲಾ ಬಯಲು ಮಾಡುವೆ ಎಂದಿದ್ಯಾರು. ಕೋತಿ ತಾನು ತಿಂದು ಮೇಕೆ ಬಾಯಿಗೆ ಒರೆಸಿದಂತಿದೆ ಇವರ ಆರೋಪ. ಡಿಸಿಎಂ ಡಿಕೆಶಿ, ಸಿಎಂ ಸಿದ್ದರಾಮಯ್ಯ ಅವರ ಪಾತ್ರ ಎಳ್ಳಷ್ಟೂ ಇಲ್ಲ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ನಮ್ಮ ಸರ್ಕಾರ ಯಾರನ್ನೂ ರಕ್ಷಣೆ ಮಾಡುವ ಉದ್ದೇಶ ಹೊಂದಿಲ್ಲ – ಪ್ರಜ್ವಲ್ ಕೇಸ್ ಬಗ್ಗೆ ಮೌನ ಮುರಿದ ಪ್ರಧಾನಿ ಮೋದಿ..!