Download Our App

Follow us

Home » ಸಿನಿಮಾ » ಕಟೀಲು ಶ್ರೀ ದುರ್ಗಾಪರಮೇಶ್ವರಿಯ ದರ್ಶನ ಪಡೆದ ನಟ ಪ್ರಭಾಸ್..!

ಕಟೀಲು ಶ್ರೀ ದುರ್ಗಾಪರಮೇಶ್ವರಿಯ ದರ್ಶನ ಪಡೆದ ನಟ ಪ್ರಭಾಸ್..!

ಮಂಗಳೂರು : ಸಲಾರ್ ಸಿನಿಮಾ ತಂಡ ಕೆಲವು ದಿನಗಳ ಹಿಂದಷ್ಟೆ ಸಿನಿಮಾದ ಗೆಲುವಿನ ಸಂಭ್ರಮ ಆಚರಣೆ ಮಾಡಿದೆ. ಇದೇ ಖುಷಿಯಲ್ಲಿ ಇದೀಗ ಪ್ರಭಾಸ್ & ಟೀಮ್ ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ತಾಯಿ ದುರ್ಗಾಪರಮೇಶ್ವರಿಯ ದರ್ಶನ ಪಡೆದಿದ್ದಾರೆ.

ಪ್ರಭಾಸ್, ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಕ್ಷೇತ್ರದ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಹೊಂಬಾಳೆ ನಿರ್ಮಾಣ ಸಂಸ್ಥೆಯ ಮಾಲೀಕ ‘ಸಲಾರ್’ ಸಿನಿಮಾದ ನಿರ್ಮಾಪಕ ವಿಜಯ್ ಕಿರಗಂದೂರು ಸಹ ಪ್ರಭಾಸ್​ರ ಜೊತೆಗಿದ್ದರು.

ದುರ್ಗಾಪರಮೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ಪ್ರಭಾಸ್​ಗೆ ದೇವಾಲಯದ ವತಿಯಿಂದ  ದುರ್ಗೆಯ ಫೋಟೊ ನೀಡಿ ಗೌರವ ಸಲ್ಲಿಸಲಾಗಿದೆ. ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ನಿರ್ಮಾಪಕ ವಿಜಯ್ ಕಿರಗಂದೂರು ಅವರು ದುರ್ಗಾಪರಮೇಶ್ವರಿಯ ಪರಮ ಭಕ್ತರು. ಕಿರಗಂದೂರು ಅವರು ಹಲವು ಭಾರಿ ಕಟೀಲಿಗೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ‘ಸಲಾರ್’ ಸಿನಿಮಾ ಗೆದ್ದ ಬಳಿಕ ಇದೀಗ ಪ್ರಭಾಸ್ ಅವರನ್ನೂ ಜೊತೆಗೆ ಕರೆತಂದು ದೇವಿಯ ದರ್ಶನ ಮಾಡಿದ್ದಾರೆ.

ಇದನ್ನೂ ಓದಿ : ಅರವಿಂದ್ ಐಯ್ಯರ್-ಸಿರಿ ಜೋಡಿಯ ‘ಬಿಸಿಬಿಸಿ Ice-Cream’ ಚಿತ್ರದ ಟ್ರೇಲರ್ ರಿಲೀಸ್..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ದುರ್ಮರಣ..!

ಬೆಂಗಳೂರು : ನಗರದಲ್ಲಿ ಸೆ.6ರ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್(32) ಅಪಘಾತದಲ್ಲಿ ಮೃತನಾದ

Live Cricket

Add Your Heading Text Here