ಬೆಂಗಳೂರು : ಸಿದ್ದರಾಮಯ್ಯನವರೇ ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟು ಕೊಡಿ, ಎಲ್ಲರೂ ಮುಖ್ಯಮಂತ್ರಿಗಳಾಗಿದ್ದಾರೆ, ಡಿಕೆಶಿ ಸಿಎಂ ಆಗಿಲ್ಲ. ಒಳ್ಳೆ ಕೆಲಸ ಮಾಡುವ ಡಿಕೆಶಿಯೂ ಸಿಎಂ ಆಗಬೇಕು ಎಂದು ಡಿ.ಕೆ.ಶಿವಕುಮಾರ್ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್ ಮಾಡಿದ್ದಾರೆ.
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಸಮ್ಮುಖದಲ್ಲೇ ಒಕ್ಕಲಿಗರ ಸ್ವಾಮೀಜಿ ಈ ರೀತಿ ಮನವಿ ಮಾಡಿದ್ದಾರೆ. ನಿಮ್ಮಿಂದ ಮಾತ್ರ ಡಿಕೆಶಿಯನ್ನು ಸಿಎಂ ಮಾಡಲು ಸಾಧ್ಯ, ಹೀಗಾಗಿ ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು. ಸಿದ್ದರಾಮಯ್ಯ ಮನಸ್ಸು ಮಾಡಿದರೆ ಮಾತ್ರ ಅದು ಸಾಧ್ಯವಾಗುತ್ತೆ, ಸಿದ್ದರಾಮಯ್ಯಗೆ ನಾನು ಮತ್ತೊಮ್ಮೆ ನಮಸ್ಕಾರ ಮಾಡುತ್ತೇನೆ. ಡಿ.ಕೆ.ಶಿವಕುಮಾರ್ ಅವರನ್ನು ದಯವಿಟ್ಟು ಮುಖ್ಯಮಂತ್ರಿ ಮಾಡಿ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಚಂದ್ರಶೇಖರ ಸ್ವಾಮೀಜಿ ಡಿಮ್ಯಾಂಡ್ ಮಾಡಿದ್ದಾರೆ.
ಡಿಕೆಶಿಯನ್ನು ಸಿಎಂ ಮಾಡಿ ಎಂಬ ಸ್ವಾಮೀಜಿ ಸಲಹೆಗೆ ಕಾರ್ಯಕ್ರಮ ಸ್ಥಳದಲ್ಲೇ ರಿಯಾಕ್ಟ್ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ಹೈಕಮಾಂಡ್ ಏನ್ ಹೇಳುತ್ತೋ ಹಾಗೆ ಮಾಡ್ತೇವೆ.
ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸ್ವಾಮೀಜಿ ಮನವಿಗೆ ಸಿಎಂ ಪ್ರತಿಕ್ರಿಯಿಸಿದ್ದಾರೆ.
ಇದನ್ನೂ ಓದಿ : ಕೆಂಪೇಗೌಡ ದಿನಾಚರಣೆಗೆ ದಳಪತಿಗಳಿಗೆ ನೀಡದ ಆಹ್ವಾನ – ಮಿಸ್ಟೇಕ್ ಆಗಿದೆ ಎಂದ ಡಿಸಿಎಂ ಡಿಕೆಶಿ..!