Download Our App

Follow us

Home » ರಾಜಕೀಯ » ಸಿದ್ದರಾಮಯ್ಯನವರೇ ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟು ಕೊಡಿ : ಚಂದ್ರಶೇಖರ ಸ್ವಾಮೀಜಿ ಮನವಿ..!

ಸಿದ್ದರಾಮಯ್ಯನವರೇ ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟು ಕೊಡಿ : ಚಂದ್ರಶೇಖರ ಸ್ವಾಮೀಜಿ ಮನವಿ..!

ಬೆಂಗಳೂರು : ಸಿದ್ದರಾಮಯ್ಯನವರೇ ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟು ಕೊಡಿ, ಎಲ್ಲರೂ ಮುಖ್ಯಮಂತ್ರಿಗಳಾಗಿದ್ದಾರೆ, ಡಿಕೆಶಿ ಸಿಎಂ ಆಗಿಲ್ಲ. ಒಳ್ಳೆ ಕೆಲಸ ಮಾಡುವ ಡಿಕೆಶಿಯೂ ಸಿಎಂ ಆಗಬೇಕು ಎಂದು ಡಿ.ಕೆ.ಶಿವಕುಮಾರ್​ ಪರ ಒಕ್ಕಲಿಗ ಸ್ವಾಮೀಜಿ  ಬ್ಯಾಟಿಂಗ್​​​ ಮಾಡಿದ್ದಾರೆ.

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಸಮ್ಮುಖದಲ್ಲೇ ಒಕ್ಕಲಿಗರ ಸ್ವಾಮೀಜಿ ಈ ರೀತಿ ಮನವಿ ಮಾಡಿದ್ದಾರೆ. ನಿಮ್ಮಿಂದ ಮಾತ್ರ ಡಿಕೆಶಿಯನ್ನು ಸಿಎಂ ಮಾಡಲು ಸಾಧ್ಯ, ಹೀಗಾಗಿ ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು. ಸಿದ್ದರಾಮಯ್ಯ ಮನಸ್ಸು ಮಾಡಿದರೆ ಮಾತ್ರ ಅದು ಸಾಧ್ಯವಾಗುತ್ತೆ, ಸಿದ್ದರಾಮಯ್ಯಗೆ ನಾನು ಮತ್ತೊಮ್ಮೆ ನಮಸ್ಕಾರ ಮಾಡುತ್ತೇನೆ. ಡಿ.ಕೆ.ಶಿವಕುಮಾರ್​​ ಅವರನ್ನು ದಯವಿಟ್ಟು ಮುಖ್ಯಮಂತ್ರಿ ಮಾಡಿ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನದ ಚಂದ್ರಶೇಖರ ಸ್ವಾಮೀಜಿ ಡಿಮ್ಯಾಂಡ್​ ಮಾಡಿದ್ದಾರೆ.

ಡಿಕೆಶಿಯನ್ನು ಸಿಎಂ ಮಾಡಿ ಎಂಬ ಸ್ವಾಮೀಜಿ ಸಲಹೆಗೆ ಕಾರ್ಯಕ್ರಮ ಸ್ಥಳದಲ್ಲೇ ರಿಯಾಕ್ಟ್ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ಹೈಕಮಾಂಡ್​ ಏನ್​ ಹೇಳುತ್ತೋ ಹಾಗೆ ಮಾಡ್ತೇವೆ.
ಹೈಕಮಾಂಡ್​ ತೀರ್ಮಾನವೇ ಅಂತಿಮ ಎಂದು ಸ್ವಾಮೀಜಿ ಮನವಿಗೆ ಸಿಎಂ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಕೆಂಪೇಗೌಡ ದಿನಾಚರಣೆಗೆ ದಳಪತಿಗಳಿಗೆ ನೀಡದ ಆಹ್ವಾನ – ಮಿಸ್ಟೇಕ್ ಆಗಿದೆ ಎಂದ ಡಿಸಿಎಂ ಡಿಕೆಶಿ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here