Download Our App

Follow us

Home » ರಾಜಕೀಯ » ಮದ್ದೂರಿನಲ್ಲಿ ನಾಳೆ ಸರ್ಕಾರಿ ಗೌರವದೊಂದಿಗೆ ಎಸ್.​ಎಂ. ಕೃಷ್ಣ ಅಂತ್ಯಸಂಸ್ಕಾರ..!

ಮದ್ದೂರಿನಲ್ಲಿ ನಾಳೆ ಸರ್ಕಾರಿ ಗೌರವದೊಂದಿಗೆ ಎಸ್.​ಎಂ. ಕೃಷ್ಣ ಅಂತ್ಯಸಂಸ್ಕಾರ..!

ಮಂಡ್ಯ : ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ , ಮಾಜಿ ವಿದೇಶಾಂಗ ಸಚಿವ ಎಸ್​ಎಂ ಕೃಷ್ಣ ಮಂಗಳವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕೃಷ್ಣ ಅವರು ತಮ್ಮ 92ನೇ ವಯಸ್ಸಿಗೆ ನಿಧನರಾಗಿದ್ದಾರೆ.

ರಾಜಕೀಯದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಗೆದ್ದು ಶಾಸಕರಾದ ನಂತರ ಕಾಂಗ್ರೆಸ್​ ಸೇರಿ 43 ವರ್ಷಗಳಲ್ಲಿ ಶಾಸಕ, ಸಚಿವ, ಮುಖ್ಯಮಂತ್ರಿ, ರಾಜ್ಯಪಾಲ ಹಾಗೂ ವಿದೇಶಾಂಗ ಸಚಿವರಂತಹ ಉನ್ನತ ಹುದ್ದೆಗಳನ್ನ ಅಲಂಕರಿಸಿ, ಮಂಡ್ಯದಿಂದ ಇಂಡಿಯಾದಲ್ಲೇ ಜನಪ್ರಿಯ ರಾಜಕಾರಣಿಯಾಗಿ ಬೆಳೆದರು.

ಇನ್ನು ಬೆಂಗಳೂರಿನಲ್ಲಿ ನಿಧನರಾಗಿರುವ ಮಾಜಿ ಸಿಎಂ ಎಸ್​ಎಂ ಕೃಷ್ಣ ಅಂತ್ಯಕ್ರಿಯೆ ಅವರ ತವರು ಮದ್ದೂರಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ನಡೆಯಲಿದೆ. ಇಂದು ಸಂಜೆವರೆಗೂ ಬೆಂಗಳೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನದವರೆಗೂ ಮದ್ದೂರಿನಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4 ಗಂಟೆ ಸುಮಾರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಸೋಮನಹಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

ಎಸ್​ಎಂ ಕೃಷ್ಣ ಅವರಿಗೆ ಇಷ್ಟವಾದ ಜಾಗದಲ್ಲಿಯೇ, ಅಂದರೆ ಕಾಫಿಡೇ ಆವರಣದಲ್ಲಿ ಅಂತ್ಯಕ್ರಿಯೆ‌ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ವಿದೇಶದಿಂದ ಸಂಬಂಧಿಕರು ಬರಬೇಕಿರುವ ಹಿನ್ನೆಲೆ ನಾಳೆ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ : RBI ನೂತನ ಗವರ್ನರ್ ಆಗಿ ಸಂಜಯ್‌ ಮಲ್ಹೋತ್ರಾ ನೇಮಕ – ಯಾರಿವರು?

Leave a Comment

DG Ad

RELATED LATEST NEWS

Top Headlines

ಸ್ಯಾಂಡಲ್​ವುಡ್​​ನಲ್ಲಿ ‘ಮಲ್ಟಿ’ ಸ್ಟಾರ್ಸ್​ ಹಂಗಾಮಾ – ಸ್ವಾತಂತ್ರ್ಯ ದಿನಾಚರಣೆಗೆ ಬಹುನಿರೀಕ್ಷಿತ ‘45’ ಸಿನಿಮಾ ರಿಲೀಸ್..!

2025ರ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ “45” ಚಿತ್ರ ಆಗಸ್ಟ್ 15 ಸ್ವಾತಂತ್ರ್ಯ ದಿನೋತ್ಸವದಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಾಮಾನ್ಯವಾಗಿ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ರಿಲೀಸ್ ಡೇಟ್​​ನ ಅನೌನ್ಸ್

Live Cricket

Add Your Heading Text Here