ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ದರ್ಶನ್ ಅಭಿಮಾನಿಗಳು ತಮ್ಮ ಬಾಸ್ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಬ್ಯಾಟಿಂಗ್ ಮಾಡುತ್ತಿದ್ದಾರೆ. ದರ್ಶನ್ ಅಭಿಮಾನಿಗಳ ಕಾಮೆಂಟ್ಸ್ನಿಂದ ರೀಲ್ಸ್ ಸ್ಟಾರ್, ಬಿಗ್ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅವರು ನೊಂದು ವಿಡಿಯೋ ಮಾಡಿದ್ದಾರೆ.
ದರ್ಶನ್ ಅಭಿಮಾನಿಗಳು ಕೆಟ್ಟದಾಗಿ ಕಾಮೆಂಟ್ ಮಾಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಸೋನು ಶ್ರೀನಿವಾಸ್ ಗೌಡ ಅವರು ಆರೋಪಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸೋನು ಮಾಹಿತಿ ಹಂಚಿಕೊಂಡಿದ್ದಾರೆ. ದರ್ಶನ್ ಪರವಾಗಿ ನಾನು ಮಾತನಾಡಿಲ್ಲ ಎಂದು ಕೆಟ್ಟದಾಗಿ ಕಾಮೆಂಟ್ಸ್ ಮಾಡುತ್ತಿದ್ದಾರೆ. ಈ ಕುರಿತು ಸೋನುಗೌಡ ಅವರು ರೀಲ್ಸ್ ನಲ್ಲೇ ಅಳಲು ತೋಡಿಕೊಂಡಿದ್ದಾರೆ.
ದರ್ಶನ್ ಅಭಿಮಾನಿಗಳು ನನಗೆ ತುಂಬಾ ಬ್ಯಾಡ್ ಕಮೆಂಟ್ಸ್ ಮಾಡುತ್ತಿದ್ದಾರೆ. ನಾನು ತುಂಬ ಚಿಕ್ಕವಳು ದರ್ಶನ್ ಸರ್ ಅವರ ಬಗ್ಗೆ ಮಾತಾಡುವಷ್ಟು ಇನ್ನೂ ಬೆಳೆದಿಲ್ಲ. ದರ್ಶನ್ ತುಂಬ ಜನರಿಗೆ ಸಹಾಯ ಮಾಡಿದ್ದಾರೆ. ನಾವು ಒಂದು ಸಲ ಅವರಿಗೆ ಫ್ಯಾನ್ ಆದ್ರೆ ಸಾಯೋವರಿಗೂ ಅವರ ಫ್ಯಾನ್ ಆಗಿರುತ್ತೇವೆ. ಅವರು ಇಂತಹ ಕೆಲಸ ಮಾಡಲು ಸಾಧ್ಯವಿಲ್ಲ, ಎರಡು ಕುಟುಂಬಕ್ಕೆ ಧೈರ್ಯ ಕೊಡಲಿ, ಬ್ಯಾಡ್ ಕಾಮೆಂಟ್ಸ್ ಮಾಡಬೇಡಿ ಅಂತಾ ಸೋನುಗೌಡ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : ‘ಚೌಕಿದಾರ್’ ಸಿನಿಮಾದಲ್ಲಿ ಪೃಥ್ವಿ ಅಂಬಾರ್ಗೆ ಜೋಡಿಯಾದ ದೊಡ್ಮನೆ ಬ್ಯೂಟಿ ಧನ್ಯ ರಾಮ್ಕುಮಾರ್..!