ಬೆಂಗಳೂರು : ಇಂದು ನಾಡಿನೆಲ್ಲೆಡೆ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ರಾಜ್ಯದಾದ್ಯಂತ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಕೈಂಕಾರ್ಯಗಳು ನಡೆಯುತ್ತಿವೆ. ಅದರಲ್ಲೂ ಬೆಂಗಳೂರಿನಲ್ಲಿ ಬನಶಂಕರಿ ದೇವಿಗೆ ಮಾಡಿದ್ದ ನೋಟುಗಳ ಅಲಂಕಾರ ಎಲ್ಲರ ಗಮನ ಸೆಳೆದಿದೆ.
ದೇವಿಯ ಹಿಂಬದಿ ಹಾಗೂ ಅಕ್ಕಪಕ್ಕ ನೋಟುಗಳಿಂದ ಅಲಂಕಾರ ಮಾಡಿದ್ದು, ಭಕ್ತರು ಬೆಳಗ್ಗೆಯಿಂದಲೇ ದೇಗುಲಕ್ಕೆ ಆಗಮಿಸಿ ದೇವಿಯನ್ನ ಕಣ್ತುಂಬಿಕೊಂಡಿದ್ದಾರೆ. ಬನಶಂಕರಿ ಅಮ್ಮನವರಿಗೆ ಒಂದು ಲಕ್ಷ ರೂ. ಹಣದಿಂದ ವಿಶೇಷ ಅಲಂಕಾರ ಮಾಡಲಾಗಿದೆ.
50, 10 ಮತ್ತು 20 ರೂ ಬಳಸಿಕೊಂಡು ಅಲಂಕಾರ ಮಾಡಿ ಬಳಿಕ ದೇವರ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಸಾಕಷ್ಟು ಸಂಖ್ಯೆಯಲ್ಲಿ ಭಕ್ತದಿಗಳು ಆಗಮಿಸುತ್ತಿದ್ದು, ಅಮ್ಮನವರಿಗೆ ತುಪ್ಪದ ದೀಪ ಹಚ್ಚಿ, ಬಾಗಿನ ಕೊಟ್ಟು ವರಮಹಾಲಕ್ಷ್ಮೀ ಹಬ್ಬವನ್ನು ಸಂಭ್ರಮಿಸಿದ್ದಾರೆ.
ಇದನ್ನೂ ಓದಿ : PSI ಪುಟ್ಟಸ್ವಾಮಿ ಮನೆಯಲ್ಲಿ ದರೋಡೆ ಪ್ರಕರಣ – ತನಿಖೆಯಲ್ಲಿ ಬಯಲಾಯ್ತು ಸ್ಫೋಟಕ ರಹಸ್ಯ..!
Post Views: 66