ಲಕ್ನೋ : ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ನೀಡಿರುವ ವಾರಣಾಸಿ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ. ಇದರಿಂದ ಜ್ಞಾನವಾಪಿ ಮಸೀದಿ ಸಮಿತಿಗೆ ಹಿನ್ನಡೆಯಾಗಿದೆ.
ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆ ಕೋರಿ ಜ್ಞಾನವಾಪಿ ಮಸೀದಿ ಸಮಿತಿ ಅಲಹಾಬಾದ್ ಹೈಕೋರ್ಟ್ ಗೆ ಮನವಿ ಸಲ್ಲಿಸಿತ್ತು. ಜಿಲ್ಲಾ ಕೋರ್ಟ್ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಫೆ.6 ರೊಳಗೆ ತನ್ನ ಮನವಿಗೆ ತಿದ್ದುಪಡಿಗಳನ್ನು ಮಾಡಲು ಮಸೀದಿ ಸಮಿತಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಪೂಜೆಗೆ ಅವಕಾಶ ನೀಡಬಾರದು ಎಂದು ಮುಸ್ಲಿಂ ಮುಖಂಡರ ಸಮಿತಿ ಹೈಕೋರ್ಟ್ ಮೊರೆ ಹೋಗಿತ್ತು. ಮಸೀದಿ ನೆಲಮಾಳಿಗೆಯಲ್ಲಿ ಪೂಜೆಗೆ ತಡೆ ನೀಡುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ಸುಪ್ರೀಂ ಮೊರೆ ಹೋಗಲು ಜಮಾತ್ ಮುಖಂಡರ ನಿರ್ಧಾರ ಮಾಡಿದ್ದು, ಜ್ಞಾನವಾಪಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಶುಕ್ರವಾರದ ಪ್ರಾರ್ಥನೆ ಹಿನ್ನೆಲೆಯಲ್ಲಿ ಟೈಟ್ ಸೆಕ್ಯೂರಿಟಿ ವಹಿಸಲಾಗಿದೆ.
ಇದನ್ನೂ ಓದಿ : ತಮಿಳು ಸೂಪರ್ ಸ್ಟಾರ್ ತಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ – ನೂತನ ಪಕ್ಷ ಘೋಷಣೆ..!
Post Views: 620