ಬೆಂಗಳೂರು : ಬರ ಪರಿಹಾರ ಮನವಿ ಸಲ್ಲಿಸಲು ರಾಜ್ಯ ಸರಕಾರ ಮೂರು ತಿಂಗಳು ವಿಳಂಬ ಮಾಡಿದೆ ಎಂದು ಅಮಿತ್ ಶಾ ಅವರು ಹೇಳಿಕೆ ಕೊಟ್ಟಿದ್ದರು. ಇದೀಗ ಬರ ಪರಿಹಾರ ವಿಚಾರ ಸಂಬಂಧ ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿ, ಸರ್ಕಾರ ಜುಲೈನಲ್ಲೇ ಬರ ಘೋಷಣೆ ಏಕೆ ಮಾಡಿಲ್ಲ, ಬರ ಘೋಷಣೆ ವಿಳಂಬ ಮಾಡಿ ಕೇಂದ್ರವನ್ನು ದೂರುತ್ತಿದ್ದಾರೆ. ಬರ ಪರಿಹಾರ ವಿಚಾರದಲ್ಲಿ ಅಮಿತ್ ಶಾ ಅವ್ರು ಹೇಳಿದ್ದು ಸರಿ ಇದೆ ಎಂದು ಹೇಳಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಆರ್.ಅಶೋಕ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಕ್ಟೋಬರ್ನಲ್ಲಿ ಬರ ಘೋಷಣೆ ಮಾಡಿದೆ. ಸೋಶಿಯಲ್ ಮೀಡಿಯಾಗಳಲ್ಲಿ ಚರ್ಚೆಗೆ ಆಹ್ವಾನಕೊಡ್ತೀರಾ..?ಲೋಕಸಭೆ, ರಾಜ್ಯಸಭೆಯಲ್ಲಿ ಕಾಂಗ್ರೆಸ್ ಯಾಕೆ ಪ್ರಶ್ನೆ ಮಾಡಿಲ್ಲ ಎಂದಿದ್ದಾರೆ.
ಕರ್ನಾಟಕಕ್ಕೆ ಅನ್ಯಾಯ ಆಗಿದೆ ಅಂತ ಯಾಕೆ ಧ್ವನಿ ಎತ್ತಿಲ್ಲ..? ದೆಹಲಿಯಲ್ಲಿರೋ ಕಾಂಗ್ರೆಸ್ ನಾಯಕರಿಗೆ ಕೆಪಾಸಿಟಿ ಇಲ್ವಾ..? ಎಂದು ಬರ ವಿಚಾರದಲ್ಲಿ ಕಾಂಗ್ರೆಸ್ ಆರೋಪಕ್ಕೆ ಆರ್. ಅಶೋಕ್ ಕೆಂಡ ಕಾರಿದ್ದಾರೆ.
ಇದನ್ನೂ ಓದಿ : ಚುನಾವಣಾ ಅಕ್ರಮಗಳ ತಡೆಗೆ ಆಯೋಗದಿಂದ ಸಿ-ವಿಜಿಲ್ ಆ್ಯಪ್ ಜಾರಿ..!