Download Our App

Follow us

Home » ಅಪರಾಧ » ಪಿಎಸ್​ಐ – ಸಿಐಟಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ – ಸಬ್​ಇನ್ಸ್​ಪೆಕ್ಟರ್ ಸಿಸಿಬಿ​ ವಶಕ್ಕೆ..!

ಪಿಎಸ್​ಐ – ಸಿಐಟಿ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ – ಸಬ್​ಇನ್ಸ್​ಪೆಕ್ಟರ್ ಸಿಸಿಬಿ​ ವಶಕ್ಕೆ..!

ಬೆಂಗಳೂರು : 545 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಇದೀಗ ಮರು ಪರೀಕ್ಷೆ ನಡೆಸಲಾಗುತ್ತಿದೆ. ಇದೇ ಜನವರಿ 23ರಂದು ಮರು ಪರೀಕ್ಷೆ ನಡೆಯಲಿದೆ. ಹೀಗಿರುವಾಗ ಮತ್ತೆ ಪಿಎಸ್‌ಐ ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಇಂಟೆಲಿಜೆನ್ಸ್ ವಿಭಾಗದ ಸಬ್​ ಇನ್ಸ್​ಪೆಕ್ಟರ್​ ಆಗಿರುವ ಲಿಂಗಯ್ಯ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಈ ಸಂಬಂಧ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪರೀಕ್ಷಾರ್ಥಿಗಳು ಚಂದ್ರಾಲೇಔಟ್​​​ ಠಾಣೆಗೆ ದೂರನ್ನು ನೀಡಿದ್ದಾರೆ.

ಲಕ್ಷ ಲಕ್ಷ ಹಣಕ್ಕೆ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದಾರೆ ಎಂಬ ಆರೋಪ ಬಂದ ಬೆನ್ನಲ್ಲೇ, ಇದೀಗ ಸಿಸಿಬಿ ಪೊಲೀಸರು, ಇನ್ಸ್​ಪೆಕ್ಟರ್​ ಲಿಂಗಯ್ಯನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ. ಆಡಿಯೋ ಮತ್ತು ವಾಟ್ಸಾಪ್ ಚಾಟಿಂಗ್ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

ಎರಡೂ ಪರೀಕ್ಷೆಗಳ ಅಕ್ರಮಕ್ಕೆ ಸಂಚು ರೂಪಿಸಿದ್ದಾರೆ : ಕಾಂತಕುಮಾರ್

ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಾಂತಕುಮಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, 1 ಲಕ್ಷ 60 ಸಾವಿರ ಅಭ್ಯರ್ಥಿಗಳು ಸಿಟಿಐ ಪರೀಕ್ಷೆ ಬರೆಯಲಿದ್ದಾರೆ. ಲಿಂಗಯ್ಯ ಎಂಬ ಪಿಎಸ್ಐ ಮಾತನಾಡಿದ ಆಡಿಯೋ ಲಭ್ಯವಾಗಿದೆ. ಪ್ರಶ್ನೆ ಪತ್ರಿಕೆ ನಾವೇ ಕೊಡುತ್ತೇವೆ, ಪೋಸ್ಟಿಂಗ್ ಕೊಡಿಸುತ್ತೇವೆ ಎಂದಿದ್ದಾರೆ. ಪಿಎಸ್​​ಐ ಪರೀಕ್ಷೆ ಕೂಡ ಬರೆಸುತ್ತೇವೆ ಅಂತಾ ಮಾತನಾಡಿದ್ದಾರೆ. ಕೆಪಿಎಸ್​​ಸಿ ಬೋರ್ಡ್​ ಮುಂದೆ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ. ಆದರೆ ಪೋಷಕರನ್ನು ಭೇಟಿಮಾಡಲು ಒಳಗಡೆ ಕರೆಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.

ಜ.21ರಂದು ಕಮರ್ಷಿಯಲ್ ಟ್ಯಾಕ್ಸ್ ಇನ್ಸ್​ಪೆಕ್ಟರ್ ಪರೀಕ್ಷೆ ಇದೆ. ಜ.23ರಂದು ನಡೆಯುವ ಪಿಎಸ್​ಐ ಪರೀಕ್ಷೆಗೆ ಸಂಚು ನಡೆಸಿದ್ದಾರೆ. ಎರಡೂ ಪರೀಕ್ಷೆಗಳ ಅಕ್ರಮಕ್ಕೆ ಸಂಚು ರೂಪಿಸಿದ್ದಾರೆ. ಒಂದು ಹುದ್ದೆಗೆ 80 ಲಕ್ಷ ರೂಪಾಯಿ ಡಿಮ್ಯಾಂಡ್ ಮಾಡುತ್ತಿದ್ದಾರೆ. ಆಡಿಯೋದಲ್ಲಿ ಪವನ್ ಮತ್ತು ರಜತ್ ಎಂಬುವರ ಹೆಸರು ಉಲ್ಲೇಖಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ನ್ಯಾ. ಪಿ.ಎಸ್ ದಿನೇಶ್ ಕುಮಾರ್ ಹೆಸರು ಶಿಫಾರಸ್ಸು..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here