ರಾಯಚೂರು : ರಾಯಚೂರಿನಲ್ಲಿ ತಾಯಿ ಮತ್ತು ಮಗನ ಮೇಲೆ ಬೀದಿ ನಾಯಿ ಅಟ್ಯಾಕ್ ಮಾಡಿದೆ. ಸಿಂಧನೂರು ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಆಸ್ಪತ್ರೆಗೆಂದು ಆದರ್ಶ ಕಾಲೋನಿಗೆ ಹೋಗಿದ್ದ ಪ್ರೀತಂ ಹಾಗೂ ಗಂಗಮ್ಮ ಮೇಲೆ ಏಕಾಏಕಿ ನಾಯಿ ದಾಳಿ ನಡೆಸಿದೆ.
ನಾಯಿ ದಾಳಿಯಿಂದ ಮಗನನ್ನ ರಕ್ಷಿಸಲು ಹೋದ ತಾಯಿ ಗಂಗಮ್ಮ ಅವರಿಗೂ ಬೀದಿ ನಾಯಿ ಕಚ್ಚಿ ಗಾಯ ಮಾಡಿದೆ. ಕೊನೆಗೆ ಸ್ಥಳೀಯರು ಧಾವಿಸಿ ನಾಯಿಯನ್ನು ಓಡಿಸಿ ಇಬ್ಬರನ್ನು ರಕ್ಷಿಸಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಸಿಂಧನೂರು ತಾಲ್ಲೂಕು ಆಸ್ಪತ್ರೆಯಲ್ಲಿ ತಾಯಿ-ಮಗ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.
ಇದನ್ನೂ ಓದಿ : ಪ್ರೇಮಿಗಳೆಂದು ಭಾವಿಸಿ ಅಕ್ಕ-ತಮ್ಮನ ಮೇಲೆ ಹಲ್ಲೆ ಮಾಡಿದ ಕಿಡಿಗೇಡಿಗಳು..!
Post Views: 603