Download Our App

Follow us

Home » ರಾಜಕೀಯ » ವಿಧಾನಪರಿಷತ್ ಚುನಾವಣೆ : ​​BJP ಟಿಕೆಟ್​ ನಿರೀಕ್ಷೆಯಲ್ಲಿದ್ದ ಸುಮಲತಾ ಅಂಬರೀಶ್​​ಗೆ ನಿರಾಸೆ..!

ವಿಧಾನಪರಿಷತ್ ಚುನಾವಣೆ : ​​BJP ಟಿಕೆಟ್​ ನಿರೀಕ್ಷೆಯಲ್ಲಿದ್ದ ಸುಮಲತಾ ಅಂಬರೀಶ್​​ಗೆ ನಿರಾಸೆ..!

ಬೆಂಗಳೂರು :  ವಿಧಾನಪರಿಷತ್ ಚುನಾವಣೆಗೆ ದಿನಗಣನೆ ಶುರುವಾಗಿರುವ ಹೊತ್ತಲ್ಲೇ ಬಿಜೆಪಿ ಕೊನೆಗೂ ಟಿಕೆಟ್‌ ಘೋಷಣೆ ಮಾಡಿದೆ. ಬಿಜೆಪಿ ಹೈಕಮಾಂಡ್ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಹಾಗೂ ಎಂ.ಜಿ ಮುಳೆ ಅವರಿಗೆ ಟಿಕೆಟ್ ನೀಡಿದೆ. ಆದರೆ ಇದೀಗ ಈ ಟಿಕೆಟ್​​ ಘೋಷಣೆಯಿಂದ ಮಂಡ್ಯ ಮಾಜಿ ಸಂಸದೆ ಸುಮಲತಾಗೆ ಭಾರೀ ನಿರಾಸೆಯಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಗೆ ಒಪ್ಪಿಗೆ ಸೂಚಿಸಿದ್ದ ಸಂಸದೆ ಸುಮಲತಾ ಅಂಬರೀಶ್ ಮಂಡ್ಯ ಚುನಾವಣೆಯ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರಿಗೆ ಮಂಡ್ಯ ಟಿಕೆಟ್ ನೀಡದೆ ಜೆಡಿಎಸ್‌‌ಗೆ ಬಿಟ್ಟುಕೊಡಲಾಗಿತ್ತು.

ಸಂಸದೆ ಸುಮಲತಾ ಮಂಡ್ಯ ಟಿಕೆಟ್​ ಬಿಟ್ಟುಕೊಟ್ಟಾಗ ಮನವೊಲಿಸಿದ್ದ ಬಿಜೆಪಿ ಮುಂದಿನ ದಿನಗಳಲ್ಲಿ ಅವಕಾಶ ಕಲ್ಪಿಸಿಕೊಡುವ ಭರವಸೆ ನೀಡಿತ್ತು. ಇದರ ಬೆನ್ನಲ್ಲೇ ವಿಧಾನಪರಿಷತ್‌ಗೆ
ಬಿಜೆಪಿಯಿಂದ ಟಿಕೆಟ್​ ಸಿಗುವ ಸುದ್ದಿ ಹರಿದಾಡಿತ್ತು. ತನಗೇ ಟಿಕೆಟ್​ ಸಿಗುತ್ತೆ ಎಂದು ವಿಶ್ವಾಸದಲ್ಲಿದ್ದ ಸುಮಲತಾ ಅಂಬರೀಶ್​​ಗೆ  BJP ನಡೆಯಿಂದ ಮಾಜಿ ಸಂಸಸದೆ ಸುಮಲತಾಗೆ ನಿರಾಸೆಯಾಗಿದೆ.

ಇದನ್ನೂ ಓದಿ :ಬೆಂಗಳೂರಿನಲ್ಲಿ ಕೌಂಟಿಂಗ್​​​ ತಯಾರಿ ಸ್ಟಾರ್ಟ್​- ಸ್ಟ್ರಾಂಗ್​ ರೂಂ ಪರಿಶೀಲನೆ ಮಾಡಿದ ತುಷಾರ್​ ಗಿರಿನಾಥ್​​..! 

Leave a Comment

DG Ad

RELATED LATEST NEWS

Top Headlines

ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕನ್ನಡ ಮನಸ್ಸುಗಳೆಲ್ಲಾ ಒಂದಾಗಬೇಕು : ಸಚಿವ ಎನ್.ಚಲುವರಾಯಸ್ವಾಮಿ..!

ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಡಿ.20 ರಿಂದ 22ರವರಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಯಲು ಕನ್ನಡದ ಎಲ್ಲಾ ಮನಸ್ಸುಗಳು

Live Cricket

Add Your Heading Text Here