ಬೆಂಗಳೂರು : ವಿಧಾನಪರಿಷತ್ ಚುನಾವಣೆಗೆ ದಿನಗಣನೆ ಶುರುವಾಗಿರುವ ಹೊತ್ತಲ್ಲೇ ಬಿಜೆಪಿ ಕೊನೆಗೂ ಟಿಕೆಟ್ ಘೋಷಣೆ ಮಾಡಿದೆ. ಬಿಜೆಪಿ ಹೈಕಮಾಂಡ್ ಮಾಜಿ ಸಚಿವ ಸಿ.ಟಿ ರವಿ, ಎನ್. ರವಿಕುಮಾರ್ ಹಾಗೂ ಎಂ.ಜಿ ಮುಳೆ ಅವರಿಗೆ ಟಿಕೆಟ್ ನೀಡಿದೆ. ಆದರೆ ಇದೀಗ ಈ ಟಿಕೆಟ್ ಘೋಷಣೆಯಿಂದ ಮಂಡ್ಯ ಮಾಜಿ ಸಂಸದೆ ಸುಮಲತಾಗೆ ಭಾರೀ ನಿರಾಸೆಯಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿಗೆ ಒಪ್ಪಿಗೆ ಸೂಚಿಸಿದ್ದ ಸಂಸದೆ ಸುಮಲತಾ ಅಂಬರೀಶ್ ಮಂಡ್ಯ ಚುನಾವಣೆಯ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರಿಗೆ ಮಂಡ್ಯ ಟಿಕೆಟ್ ನೀಡದೆ ಜೆಡಿಎಸ್ಗೆ ಬಿಟ್ಟುಕೊಡಲಾಗಿತ್ತು.
ಸಂಸದೆ ಸುಮಲತಾ ಮಂಡ್ಯ ಟಿಕೆಟ್ ಬಿಟ್ಟುಕೊಟ್ಟಾಗ ಮನವೊಲಿಸಿದ್ದ ಬಿಜೆಪಿ ಮುಂದಿನ ದಿನಗಳಲ್ಲಿ ಅವಕಾಶ ಕಲ್ಪಿಸಿಕೊಡುವ ಭರವಸೆ ನೀಡಿತ್ತು. ಇದರ ಬೆನ್ನಲ್ಲೇ ವಿಧಾನಪರಿಷತ್ಗೆ
ಬಿಜೆಪಿಯಿಂದ ಟಿಕೆಟ್ ಸಿಗುವ ಸುದ್ದಿ ಹರಿದಾಡಿತ್ತು. ತನಗೇ ಟಿಕೆಟ್ ಸಿಗುತ್ತೆ ಎಂದು ವಿಶ್ವಾಸದಲ್ಲಿದ್ದ ಸುಮಲತಾ ಅಂಬರೀಶ್ಗೆ BJP ನಡೆಯಿಂದ ಮಾಜಿ ಸಂಸಸದೆ ಸುಮಲತಾಗೆ ನಿರಾಸೆಯಾಗಿದೆ.
ಇದನ್ನೂ ಓದಿ :ಬೆಂಗಳೂರಿನಲ್ಲಿ ಕೌಂಟಿಂಗ್ ತಯಾರಿ ಸ್ಟಾರ್ಟ್- ಸ್ಟ್ರಾಂಗ್ ರೂಂ ಪರಿಶೀಲನೆ ಮಾಡಿದ ತುಷಾರ್ ಗಿರಿನಾಥ್..!