ಶಿವಮೊಗ್ಗ : ಬೆಂಗಳೂರಿನ ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಇಲಾಖಾ ಸಚಿವರು ಹಾಗೂ ಅಧಿಕಾರಿಗಳ ಹೆಸರು ಬರೆದಿಟ್ಟು ಚಂದ್ರಶೇಖರ್ ಸೂಸೈಡ್ ಮಾಡಿಕೊಂಡಿದ್ದಾರೆ.
ಚಂದ್ರಶೇಖರ್ ಶಿವಮೊಗ್ಗದ ವಿನೋಬನಗರದ ಕೆಂಚಪ್ಪ ಲೇಔಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಂದ್ರಶೇಖರ್ ಡೆತ್ನೋಟ್ನಲ್ಲಿ ಬೆಚ್ಚಿಬೀಳೋ ಹಗರಣ ಬಯಲಾಗಿದೆ. MPMನಲ್ಲಿ ಚಂದ್ರಶೇಖರ್ ಸ್ಯಾಲರಿ ಡಿಪಾರ್ಟ್ಮೆಂಟ್ನಲ್ಲಿದ್ದರು, ನಿಗಮದಲ್ಲಿ 187 ಕೋಟಿ ಹಗರಣಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರಿಗೆ ಸಿಕ್ಕ ಡೆತ್ನೋಟ್ನಲ್ಲಿ ಬ್ರಹ್ಮಾಂಡ ಹಗರಣದ ಉಲ್ಲೇಖವಾಗಿದೆ.
187 ಕೋಟಿ ಮೌಲ್ಯದ ಹಗರಣವನ್ನು ಚಂದ್ರಶೇಖರ್ ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ. 85 ಕೋಟಿ ರೂ. ಹಣವನ್ನು ಕಾನೂನು ಬಾಹಿರವಾಗಿ ವರ್ಗಾಯಿಸಿದ್ದಾರೆ, ಅವರು ಮಾಡಿದ ತಪ್ಪನ್ನು ತಮ್ಮ ಮೇಲೆ ಹಾಕಲು ಹೊರಟಿದ್ದಾರೆ ಎಂದು ಡೆತ್ನೋಟ್ನಲ್ಲಿ ಬರೆದಿದ್ದಾರೆ. 6 ಪುಟಗಳ ಡೆತ್ ನೋಟ್ನಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್ ಉನಗಣ್ಣನವರ್, ಯೂನಿಯನ್ ಬ್ಯಾಂಕ್ ಚೀಫ್ ಮ್ಯಾನೇಜರ್ ಶುಚಿಸ್ಮಿತ ರಾವತ್ ಹೆಸರನ್ನು ಉಲ್ಲೇಖಿಸಿದ್ದಾರೆ. ಐಪಿಸಿ ಸೆಕ್ಷನ್ 306ರ ಅಡಿಯಲ್ಲಿ ಈ ಪ್ರಕರಣ ದಾಖಲಾಗಿದೆ.
85 ಕೋಟಿ ಹಣ ವರ್ಗಾವಣೆಗೆ ನಾನು ಕಾರಣ ಅಲ್ಲ, ಸಚಿವರ ಮೌಖಿಕ ಸೂಚನೆ ಮೇರೆಗೆ ಉಪಖಾತೆ ತೆರೆಯಲಾಗಿತ್ತು. ಎಂಜಿ ರಸ್ತೆಯ ಯೂನಿಯನ್ ಬ್ಯಾಂಕ್ನಲ್ಲಿ ಸಬ್-ಅಕೌಂಟ್ ಓಪನ್ ಮಾಡಿ ನಂತರ ನಿಗಮದ ಅಕೌಂಟ್ನನ್ನು ಎಂಜಿ ರೋಡ್ಗೆ ವರ್ಗಾಯಿಸಲಾಗಿದೆ. ಮಾರ್ಚ್ 4 ರಂದು 25 ಕೋಟಿ, 6ರಂದು 25 ಕೋಟಿ ವರ್ಗಾಯಿಸಲಾಗಿದೆ. ಮಾರ್ಚ್ 21ರಂದು 44 ಕೋಟಿ ವರ್ಗಾಯಿಸಲಾಗಿದೆ ಎಂದು ಉಲ್ಲೇಖ ಮಾಡಿದ್ದಾರೆ.
ಜೊತೆಗೆ ಖಜಾನೆಯಿಂದ 43.33 ಕೋಟಿ, 21ರಂದು 50 ಕೋಟಿ ಟ್ರಾನ್ಸ್ಫರ್ ಆಗಿದೆ ಎಂದು ಡೆತ್ನೋಟ್ನಲ್ಲಿ ಚಂದ್ರಶೇಖರ್ ಸಂಪೂರ್ಣ ವ್ಯವಹಾರದ ಮಾಹಿತಿ ಬರೆದಿದ್ದಾರೆ. ಒತ್ತಡ ಹೇರಿ ತಮ್ಮಿಂದ ಚೆಕ್ ಬರೆಸಲಾಗಿದೆ ಎಂದು ನಿಗಮದ ಅಧಿಕಾರಿಗಳ ಮೇಲೆ ಚಂದ್ರಶೇಖರ್ ಆರೋಪ ಮಾಡಿದ್ದಾರೆ.
ಇದನ್ನೂ ಓದಿ : ಕಲಬುರಗಿಯಲ್ಲಿ ಬೈಕ್-ಕೆಕೆಆರ್ಟಿಸಿ ಬಸ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ ಮೂವರು ಸಾ*ವು..!