ಮಂಡ್ಯ : ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ದೀಪಿಕಾಳನ್ನು ಅಕ್ಕ ಅಕ್ಕ ಎನ್ನುತ್ತಲೇ ಬೆಟ್ಟದ ತಪ್ಪಲಿಗೆ ಕರೆದೊಯ್ದು ಕೊಲೆಗೈದ ಹಂತಕನನ್ನು ಪೊಲೀಸರು 30 ಗಂಟೆಯೊಳಗೆ ಕಾರ್ಯಾಚರಣೆ ಮಾಡಿ ಅರೆಸ್ಟ್ ಮಾಡಿದ್ದಾರೆ.
ಮೇಲುಕೋಟೆ ಶಿಕ್ಷಕಿ ಮಿಸ್ಸಿಂಗ್ ಮತ್ತು ಮರ್ಡರ್ ಕೇಸ್ ಪ್ರಕರಣ ಬೆಳಕಿಗೆ ಬಂದ 30 ಗಂಟೆಯಲ್ಲೇ ಹಂತಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಜ.20ರಂದು ಶಿಕ್ಷಕಿಯನ್ನು ಕೊಲೆಗೈದು ತಲೆಮರೆಸಿಕೂಂಡಿದ್ದ 22 ವರ್ಷದ ನಿತೀಶ್ನನ್ನು ವಿಜಯನಗರ ಜಿಲ್ಲೆ ಜಿಲ್ಲಾಕೇಂದ್ರ ಹೊಸಪೇಟೆಯಲ್ಲಿ ಅರೆಸ್ಟ್ ಮಾಡಲಾಗಿದೆ. ಮೇಲುಕೋಟೆ ಬೆಟ್ಟದ ತಪ್ಪಲಲ್ಲಿ ಶಿಕ್ಷಕಿ ಕೊಂದು, ಶವ ಹೂತಿಟ್ಟಿದ್ದನು. ಮೃತ ದೀಪಿಕಾ (28) ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿ ಗ್ರಾಮದವಳಾಗಿದ್ದು, ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದಳು.
ಶನಿವಾರ ಮಧ್ಯಾಹ್ನ ಶಾಲೆಯಿಂದ ತೆರಳಿದ್ದ ದೀಪಿಕಾ ನಿಗೂಢವಾಗಿ ನಾಪತ್ತೆಯಾಗಿದ್ದಳು. ಅಂದು ಸಂಜೆ ಬೆಟ್ಟದ ಹಿಂಭಾಗದ ರಸ್ತೆ ಸಮೀಪ ದೀಪಿಕಾ ಸ್ಕೂಟರ್ ಪತ್ತೆಯಾಗಿತ್ತು. ಅಲ್ಲದೆ ದೀಪಿಕಾಳನ್ನ ಎಳೆದಾಡುತ್ತಿದ್ದ ದೃಶ್ಯವನ್ನ ಬೆಟ್ಟದ ಮೇಲಿಂದ ಪ್ರವಾಸಿಗೊಬ್ಬರು ವಿಡಿಯೋ ಮಾಡಿದ್ದರು. ಕೊಲೆ ಆರೋಪಿ ನಿತೀಶ್ ದೀಪಿಕಾಗೆ ಕಡೆಯದಾಗಿ ಫೋನ್ ಮಾಡಿದ್ದನು. ಬೆಟ್ಟದ ಬಳಿ ಹದ್ದು, ಕಾಗೆಗಳ ಹಾರಾಟ ಹಾಗೂ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ಸೋಮವಾರ ಸಂಜೆ ಬೆಟ್ಟದ ತಪ್ಪಲಿನಲ್ಲಿ ದೀಪಿಕಾ ಶವ ಪತ್ತೆಯಾಗಿತ್ತು.
ಇದನ್ನೂ ಓದಿ : ಹಾವೇರಿ ಲೋಕಸಭೆ ಟಿಕೆಟ್ಗಾಗಿ ಬಿಜೆಪಿಯಲ್ಲಿ ಮೂವರ ಫೈಟ್..!