ಬೆಂಗಳೂರು : ರಾಜಧಾನಿಯಲ್ಲಿ 22 ವರ್ಷದ ಟೆಕ್ಕಿಯೊಬ್ಬ ಹೀಲಿಯಂ ಗ್ಯಾಸ್ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರತಿಷ್ಟಿತ ಸಾಫ್ಟ್ವೇರ್ ಕಂಪನಿಯ ಉದ್ಯೋಗಿಯಾಗಿರುವ ಈತ, ಬಲೂನ್ಗೆ ತುಂಬಲು ಬಳಸುವ ಹೀಲಿಯಂ ಗ್ಯಾಸ್ ಮೂಲಕ ಜೀವ ತೆಗೆದುಕೊಂಡಿದ್ದಾನೆ. ಹಾಸನ ಜಿಲ್ಲೆ ಸಕಲೇಶಪುರ ಮೂಲದ 22 ವರ್ಷದ ಯಾಜ್ಙಿಕ್ ಮೃತಪಟ್ಟ ಟೆಕ್ಕಿ.
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಘಟನೆ ನಡೆದಿದ್ದು, ಕಳೆದ ಕೆಲವು ತಿಂಗಳುಗಳಿಂದ ವರ್ಕ್ ಫ್ರಂ ಹೋಂನಲ್ಲಿದ್ದ ಟೆಕ್ಕಿ ಯಾಜ್ಙಿಕ್, ಎಂಟೆಕ್ ಎಕ್ಸಾಂ ಬರೆಯುವ ಸಲುವಾಗಿ ಬೆಂಗಳೂರಿಗೆ ಬಂದಿದ್ದ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ನಗರದ ಹೋಟೆಲ್ನಲ್ಲಿ ರೂಂ ಬುಕ್ ಮಾಡಿದ್ದ. ಈತ ಸೋಮವಾರದಂದು ದೊಡ್ಡ ಬ್ಯಾಗ್ ತೆಗೆದುಕೊಂಡು ಪೀಣ್ಯ ಕಡೆ ತೆರಳಿದ್ದಾನೆ. ಪೀಣ್ಯದಲ್ಲಿ ಹೀಲಿಯಂ ಗ್ಯಾಸ್ ಖರೀದಿ ಮಾಡಿ ಲಾಡ್ಜ್ಗೆ ತಂದಿದ್ದಾನೆ.
ಬಳಿಕ ಲಾಡ್ಜ್ನ ಕೋಣೆಯಲ್ಲಿ ಪ್ಲಾಸ್ಟಿಕ್ ಕವರ್ಗೆ ಹೀಲಿಯಂ ಗ್ಯಾಸ್ ತುಂಬಿಸಿ, ಕವರ್ ಮೂಲಕ ಹೀಲಿಯಂ ಗ್ಯಾಸ್ ಇನ್ಹೇಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳಲು ನಿಖರ ಕಾಣವೇನೆಂಬುದು ಇನ್ನು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಯಾಜ್ಙಿಕ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ ಆಸ್ಪತ್ರೆಗೆ ರವಾನಿಸಿದ್ದಾರೆ.
ಇದನ್ನೂ ಓದಿ : ಬೆಳ್ತಂಗಡಿ : ಮನೆಯ ಅಂಗಳದಲ್ಲೇ ಮಾರಕಾಸ್ತ್ರದಿಂದ ಕೊಚ್ಚಿ ನಿವೃತ್ತ ಶಿಕ್ಷಕನ ಹತ್ಯೆ..!