Download Our App

Follow us

Home » ಸಿನಿಮಾ » ತೇಜಸ್ವಿನಿ ಶರ್ಮ ಹುಟ್ಟುಹಬ್ಬದಂದು ಹೊಸ ಪೋಸ್ಟರ್ ರಿಲೀಸ್​​ ಮಾಡಿದ ‘ಫುಲ್ ಮೀಲ್ಸ್’ ಚಿತ್ರತಂಡ..!

ತೇಜಸ್ವಿನಿ ಶರ್ಮ ಹುಟ್ಟುಹಬ್ಬದಂದು ಹೊಸ ಪೋಸ್ಟರ್ ರಿಲೀಸ್​​ ಮಾಡಿದ ‘ಫುಲ್ ಮೀಲ್ಸ್’ ಚಿತ್ರತಂಡ..!

ಎನ್ ವಿನಾಯಕ ಕಥೆ ಬರೆದು ನಿರ್ದೇಶಿಸಿರುವ ‘ಫುಲ್ ಮೀಲ್ಸ್’ ಚಿತ್ರ ಈಗಾಗಲೇ ತನ್ನ ಶೀರ್ಷಿಕೆಯಿಂದಲೇ ಎಲ್ಲರ ಗಮನ ಸೆಳೆದಿದೆ. ಸ್ಯಾಂಡಲ್​​ವುಡ್​​​ನ ಬ್ಯೂಟಿಫುಲ್ ನಟಿ ತೇಜಸ್ವಿನಿ ಶರ್ಮ ಕೂಡ ನಾಯಕಿಯಾಗಿ ಅಭಿನಯಿಸಿದ್ದು, ಇಂದು ಚಿತ್ರತಂಡ ಹೊಸ ಪೋಸ್ಟ‌ರ್ ಅನ್ನು ಬಿಡುಗಡೆ ಮಾಡುವ ಮೂಲಕ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು ತಿಳಿಸಿದೆ.

ಈ ಚಿತ್ರವನ್ನು ‘ಸಂಕಷ್ಟಕರ ಗಣಪತಿ’ ಹಾಗೂ ‘ಫ್ಯಾಮಿಲಿ ಪ್ಯಾಕ್’ ಚಿತ್ರದ ಮೂಲಕ ಜನಮನ ಗೆದ್ದಿರುವ ಲಿಖಿತ್ ಶೆಟ್ಟಿ ನಟಿಸಿ ನಿರ್ಮಿಸಿದ್ದಾರೆ. ತ್ರಿಕೋನ ಪ್ರೆಮಕಥೆ ಹೊಂದಿರುವ ಸಿನೆಮಾದಲ್ಲಿ ನಾಯಕ ಲಿಖಿತ್ ಶೆಟ್ಟಿ ನಾಯಕಿಯರಾದ ತೇಜಸ್ವಿನಿ ಶರ್ಮ ಮತ್ತು ಖುಷಿ ರವಿಯೊಟ್ಟಿಗಿರುವ ವಿಭಿನ್ನ ಭಂಗಿಯ, ಭಾವದ ಪೋಸ್ಟರ್ ನೋಡುಗರ ಗಮನ ಸೆಳೆದಿದ್ದು, ಸಿನೆಮಾದ ಬಗ್ಗೆ ಕುತೂಹಲ ಹೆಚ್ಚಿಸಿದೆ.

ತೇಜಸ್ವಿನಿ ಶರ್ಮ ಚಿತ್ರದಲ್ಲಿ ಮೇಕಪ್ ಆರ್ಟಿಸ್ಟ್ ಪಾತ್ರವನ್ನು ಮಾಡಿದ್ದು, ಅವರ ಪಾತ್ರವನ್ನು ತೆರೆಯ ಮೇಲೆ ನೋಡಲು ಸಾಕಷ್ಟು ಅಭಿಮಾನಿಗಳು ಕಾತುರರಾಗಿದ್ದಾರೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಬಹುತೇಕ ಮುಗಿದಿದ್ದು, ಸದ್ಯಕ್ಕೆ ಹಿನ್ನೆಲೆ ಸಂಗೀತದ ಕೆಲಸ ನಡೆಯುತ್ತಿದ್ದು, ವರ್ಷಾಂತ್ಯದೊಳಗೆ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿ ಚಿತ್ರತಂಡವಿದೆ.

ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ಸಿನೆಮಾ, ಮನೋರಂಜನೆಯ ಜೊತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಸಿನೆಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಚಿತ್ರತಂಡಕ್ಕಿದೆ. ಲಿಖಿತ್ ಶೆಟ್ಟಿಗೆ ನಾಯಕಿಯರಾಗಿ ಖುಷೀ ರವಿ ಮತ್ತು ತೇಜಸ್ವಿನಿ ಶರ್ಮ ಅಭಿನಯಿಸಿದ್ದು, ಚಿತ್ರದುರ್ಗದ ಪ್ರತಿಭೆ ಎನ್. ವಿನಾಯಕ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ.

ಸಿನೆಮಾಗೆ ಹರೀಶ್ ಗೌಡ ಸಂಭಾಷಣೆ ಬರೆದಿದ್ದು, ಮನೋಹರ್ ಜೋಷಿ ಛಾಯಾಗ್ರಹಣ, ಗುರು ಕಿರಣ್ ಸಂಗೀತ, ದೀಪು ಎಸ್ ಕುಮಾರ್ ಸಂಕಲನ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ಸೂರಜ್ ಲೋಕ್ರೆ, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಹೂನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ಚೇತನ್ ದುರ್ಗಾ, ನಾಗೇಂದ್ರ ಅರಸ್, ಮೂಗು ಸುರೇಶ್ ನಟಿಸಿದ್ದಾರೆ.

ಇದನ್ನೂ ಓದಿ : ಮೆಟ್ರೋ ಟ್ರ್ಯಾಕ್​​ ಮೇಲೆ ಹಾರಿ ಯುವಕ ಆತ್ಮಹತ್ಯೆ​ಗೆ ಯತ್ನ – ಸೂಸೈಡ್‌​​ ಸ್ಪಾಟ್​ ಆಯ್ತಾ ನಮ್ಮ ಮೆಟ್ರೋ?

Leave a Comment

DG Ad

RELATED LATEST NEWS

Top Headlines

ತಿಮ್ಮಪ್ಪನ ಭಕ್ತರಿಗೆ ಶಾಕ್.. ತಿರುಪತಿ ಲಡ್ಡಿನಲ್ಲಿ ದನ, ಹಂದಿ ಕೊಬ್ಬಿನ ಅಂಶ, ಮೀನಿನ ಎಣ್ಣೆ ಬಳಕೆ ದೃಢ..!

ತಿರುಪತಿ : ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು, ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಆಂಧ್ರ ಪ್ರದೇಶ ಸಿಎಂ ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ

Live Cricket

Add Your Heading Text Here