ಚಿತ್ರದುರ್ಗ : ಬೆಳ್ಳಂಬೆಳಗ್ಗೆ ಚಿತ್ರದುರ್ಗದಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಚಲಿಸುತ್ತಿದ್ದ ಲಾರಿಯ ಟೈಯರ್ ಬ್ಲಾಸ್ಟ್ ಆದ ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಕಾರು ಲಾರಿಗೆ ರಭಸವಾಗಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ NH 4ರಲ್ಲಿ ಘಟನೆ ನಡೆದಿದೆ. ಲಾರಿ ಮತ್ತು ಕಾರು ಚಿತ್ರದುರ್ಗ ಕಡೆಯಿಂದ ದಾವಣಗೆರೆ ಕಡೆಗೆ ಹೊರಟಿತ್ತು. ಈ ವೇಳೆ ಲಾರಿಯ ಹಿಂಬಾಗಕ್ಕೆ ಕಾರು ಗುದ್ದಿದೆ. ಕಾರಿನಲ್ಲಿದ್ದ 3 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಐವರ ಸ್ಥಿತಿ ಗಂಭೀರವಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತರ ಗುರುತು ಇನ್ನೂ ಕೂಡಾ ಪತ್ತೆಯಾಗಿಲ್ಲ. ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ಇದನ್ನೂ ಓದಿ : ಇವರೇ ನೋಡಿ ದರ್ಶನ್ ಗ್ಯಾಂಗ್ನ ಹೆಡೆಮುರಿ ಕಟ್ಟಿದ ದಕ್ಷ ಪೊಲೀಸ್ ಅಧಿಕಾರಿಗಳು..!
Post Views: 391