ಹಾಸನ : ಬೆಳ್ಳಂಬೆಳಗ್ಗೆ ಹಾಸನ ಹೊರವಲಯದ ಕಂಡ್ಲಿ ಈಚನಹಳ್ಳಿ ಗ್ರಾಮ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿ NH 75ನಲ್ಲಿ ಕಾರು ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಮಗು ಸೇರಿ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಮತ್ತು ಕಾರು ಚಾಲಕ ರಾಕೇಶ್ ಮೃತ ದುರ್ದೈವಿಗಳು. ಟ್ರಕ್ನಲ್ಲಿದ್ದ ಒಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜು ಆಗಿದೆ. ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಮಹಮದ್ ಸುಜೇತಾ ಭೇಟಿ ನೀಡಿದ್ದಾರೆ. ಹಾಸನ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಮೂಲದ ಐದು ಜನ, ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ಭೇಟಿಯಾಗಿ, ವಾಪಸ್ ಊರಿಗೆ ಹೋಗುತ್ತಿದ್ದರು. ನಸುಕಿನ ಜಾವ ಈಚನಹಳ್ಳಿ ಬಳಿ ನಿದ್ದೆ ಮಂಪರಿನಲ್ಲಿ ಅಪಘಾತ ಸಂಭವಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ವೇಗವಾಗಿ ಬರ್ತಿದ್ದ ಟ್ರಕ್ ಹಿಂಬದಿಗೆ ಕಾರು ಗುದ್ದಿದ್ದು, ಇದೇ ವೇಳೆ ಹಿಂದಿನಿಂದ ಮತ್ತೊಂದು ಲಾರಿ ಕಾರ್ಗೆ ಡಿಕ್ಕಿ ಹೊಡೆದಿದೆ. ಸೂಚನಾ ಫಲಕ ಸರಿಯಾಗಿ ಅಳವಡಿಸಿಲ್ಲ ಅನ್ನೋ ಆರೋಪ ಕೂಡ ಕೇಳಿಬಂದಿದೆ. KA-53, C-1419 ಕಾರು ಮನೋಜ್ ಕುಮಾರ್ ಎಂಬುವರಿಗೆ ಸೇರಿದೆ.
ಇದನ್ನೂ ಓದಿ : ರಾಜ್ಕೋಟ್ನ TRP ಗೇಮಿಂಗ್ ಝೋನ್ನಲ್ಲಿ ಅಗ್ನಿ ದುರಂತ – ಸಾವಿನ ಸಂಖ್ಯೆ 28ಕ್ಕೆ ಏರಿಕೆ..!