ಕೊಡಗು : ಕೊಡಗಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕುಶಾಲನಗರ ಸಮೀಪದ ಗುಡ್ಡೆಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ಯಾಂಕರ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಲಾರಿಯಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೋರ್ವ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾನೆ.
ಕುಶಾಲನಗರ ಕಡೆಯಿಂದ ಸುಂಟಿಕೊಪ್ಪಕ್ಕೆ ಬರುತ್ತಿದ್ದ ಲಾರಿ ಮತ್ತು ಮಡಿಕೇರಿ ಕಡೆಯಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ನಡುವೆ ಅವಘಡ ಸಂಭವಿಸಿದೆ. ಸುಂಟಿಕೊಪ್ಪದ ಕಾರ್ಮಿಕ ರಾಜು (ರಾಜಣ್ಣ) ಎಂಬುವವರು ತೀವ್ರವಾಗಿ ಗಾಯಗೊಂಡು ಎರಡು ಕಾಲುಗಳು ಮುರಿದ ಪರಿಣಾಮ ಜೀವ ತೆತ್ತಿದ್ದಾರೆ.
ಲಾರಿ ಚಾಲಕ 7ನೇ ಹೊಸಕೋಟೆಯ ಜಬ್ಬಾರ್ ಎಂಬುವವರಿಗೆ ಸಣ್ಣಪುಟ್ಟ ಗಾಯಗಳಿಗೊಳಗಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆ – ಶಾಸಕ ಸುನೀಲ್ ಕುಮಾರ್..!
Post Views: 139