Download Our App

Follow us

Home » ಜಿಲ್ಲೆ » ಟ್ರೈನ್​ಗೆ ಬೆಂಕಿ ಹಚ್ಚುತ್ತೇನೆಂದು ಅನ್ಯಕೋಮಿನ ಯುವಕನಿಂದ ಬೆದರಿಕೆ : ಮೈಸೂರು-ಅಯೋಧ್ಯೆ ರೈಲು 2 ಗಂಟೆ ಸ್ಥಗಿತ..!

ಟ್ರೈನ್​ಗೆ ಬೆಂಕಿ ಹಚ್ಚುತ್ತೇನೆಂದು ಅನ್ಯಕೋಮಿನ ಯುವಕನಿಂದ ಬೆದರಿಕೆ : ಮೈಸೂರು-ಅಯೋಧ್ಯೆ ರೈಲು 2 ಗಂಟೆ ಸ್ಥಗಿತ..!

ವಿಜಯನಗರ : ಟ್ರೈನ್​ಗೆ ಬೆಂಕಿ ಹಚ್ಚುತ್ತೇನೆ ಎಂದು ಅನ್ಯಕೋಮಿನ ಯುವಕ ಬೆದರಿಕೆ ಹಾಕಿದ್ದಾನೆ ಎನ್ನುವ ಕಾರಣಕ್ಕೆ ಮೈಸೂರು- ಅಯೋಧ್ಯೆ ಧಾಮ ರೈಲು  2 ಗಂಟೆ ಸ್ಥಗಿತಗೊಂಡ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.

ಅನ್ಯಕೋಮಿನ ಯುವಕ ರೈಲಿಗೆ ಬೆಂಕಿ ಹಚ್ಚುತ್ತೇನೆ ಎಂದಿದ್ದಲ್ಲದೇ ಪದೇ ಪದೇ ಚೈನ್ ಎಳೆದ ಕಾರಣ ರೈಲು ಸುಮಾರು ಎರಡು ಘಂಟೆಗಳ ಕಾಲ ತಡವಾಗಿ ಚಲಿಸಿದೆ. ಮೈಸೂರು-ಅಯೋಧ್ಯಾ ಧಾಮ ರೈಲಿನಲ್ಲಿ ನೂರಾರು ರಾಮ ಭಕ್ತರು ಪ್ರಯಾಣಿಸಲು ಸಜ್ಜಾಗಿದ್ದರು.

ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಹಿಂದೂ ಹಾಗೂ ಅನ್ಯಕೋಮಿನ ಯುವಕನ ಜೊತೆಯಲ್ಲಿ ವಾಗ್ವಾದ ನಡೆದಿದೆ. ಜಗಳ ಶುರುವಾದ ವೇಳೆ ಪದೇ ಪದೇ ಚೈನ್ ಎಳೆದ ಕಾರಣ ಟ್ರೈನ್ ಮುಂದೆ ಸಾಗಲು ತೊಂದರೆಯಾಗಿದೆ. ಹಿಂದೂಪರ ಸಂಘಟನೆಗಳು ಬೆದರಿಕೆ ಹಾಕಿದ ಕಿಡಿಗೇಡಿಯನ್ನು ಬಂಧಿಸುವಂತೆ ಪಟ್ಟು ಹಿಡಿದರು.

ಸ್ಥಳಕ್ಕೆ ವಿಜಯನಗರ ಎಸ್ಪಿ ಶ್ರೀಹರಿಬಾಬು ಭೇಟಿ ನೀಡಿದ್ರು. ಎಲ್ಲರನ್ನೂ ಸಮಾಧಾನ ಮಾಡಿ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಸತತ 11ನೇ ದಿನದಿಂದ ಅಯೋಧ್ಯೆಗೆ ಈ ರೈಲು ಸಂಚಾರ ಮಾಡುತ್ತಿದೆ. ನಿನ್ನೆ ಬೋಗಿಗಳ ಜೊತೆಗೆ ರೈಲ್ವೇ ಪೊಲೀಸರು ಮತ್ತು ಲೋಕಲ್ ಪೊಲೀಸರನ್ನು ಭದ್ರತೆ ದೃಷ್ಟಿಯಿಂದ ಕಳಿಸಿಕೊಡಲಾಯ್ತು.

ಇದನ್ನೂ ಓದಿ : ಹಾಸನದಲ್ಲಿ ಪತಿಯನ್ನು ಹಾಡಿ ಹೊಗಳಿದ ಭವಾನಿ ರೇವಣ್ಣ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ದುರ್ಮರಣ..!

ಬೆಂಗಳೂರು : ನಗರದಲ್ಲಿ ಸೆ.6ರ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್(32) ಅಪಘಾತದಲ್ಲಿ ಮೃತನಾದ

Live Cricket

Add Your Heading Text Here