Download Our App

Follow us

Home » ಅಪರಾಧ » ಕೊನೆ ಕ್ಷಣದಲ್ಲಿ ಟಿಕೆಟ್ ಕ್ಯಾನ್ಸಲ್ ​​​- ಭಾರತಕ್ಕೆ ಬರದೆ ಕೈಕೊಟ್ಟ ಪ್ರಜ್ವಲ್​​​ ರೇವಣ್ಣ..!

ಕೊನೆ ಕ್ಷಣದಲ್ಲಿ ಟಿಕೆಟ್ ಕ್ಯಾನ್ಸಲ್ ​​​- ಭಾರತಕ್ಕೆ ಬರದೆ ಕೈಕೊಟ್ಟ ಪ್ರಜ್ವಲ್​​​ ರೇವಣ್ಣ..!

ಬೆಂಗಳೂರು : ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಎಸ್‌ಐಟಿ ಮೋಸ್ಟ್ ವಾಂಟೆಡ್‌ ಲಿಸ್ಟ್‌ನಲ್ಲಿರುವ ಸಂಸದ ಪ್ರಜ್ವಲ್‌ ರೇವಣ್ಣ, ನಿನ್ನೆ (ಮೇ 15) ಜರ್ಮನಿಯಿಂದ ಬೆಂಗಳೂರಿಗೆ ಆಗಮಿಸುತ್ತಾರೆ ಎನ್ನುವ ಸುದ್ದಿ ಇತ್ತು. ಇದಕ್ಕೆ ಪೂರಕವೆಂಬಂತೆ ಪಜ್ವಲ್​ ಫ್ಲೈಟ್​ ಟಿಕೆಟ್​ ಸಹ ಬುಕ್ ಮಾಡಿದ್ದರು. ಈ ಮಾಹಿತಿ ತಿಳಿಯುತ್ತಿದ್ದಂತೆಯೇ ಎಸ್​ಐಟಿ ಅಧಿಕಾರಿಗಳು ಪ್ರಜ್ವಲ್​ಗಾಗಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದರು.

ಆದ್ರೆ, ಪ್ರಜ್ವಲ್ ರೇವಣ್ಣ, ಕೊನೆ ಕ್ಷಣದಲ್ಲಿ ಮತ್ತೊಮ್ಮೆ ವಿಮಾನ ಹತ್ತದೇ ಅಲ್ಲೇ ಉಳಿದುಕೊಂಡಿದ್ದಾರೆ. ಈ ಮೂಲಕ ವಿದೇಶದಲ್ಲಿದ್ದುಕೊಂಡು ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಅವರು ನಿನ್ನೆ (ಮೇ 15) 12.20ರ ವಿಮಾನದ ಟಿಕೆಟ್​ ಬುಕ್ ಮಾಡಿದ್ದರು. ಆದ್ರೆ, ಪ್ರಜ್ವಲ್​ ಕೊನೆ ಕ್ಷಣದಲ್ಲಿ ವಿಮಾನ ಹತ್ತದೇ ಮತ್ತೊಮ್ಮೆ ಬೆಂಗಳೂರು ಪ್ರಯಾಣವನ್ನು ರದ್ದು ಮಾಡಿದ್ದಾರೆ.

ಪ್ರಜ್ವಲ್ ಬುಕ್ ಮಾಡಿದ್ದ ವಿಮಾನ ಈಗಾಗಲೇ ಟೇಕಾಫ್ ಆಗಿ ಬೆಂಗಳೂರಿಗೆ ಬಂದಿದೆ. ಆದ್ರೆ, ಪ್ರಜ್ವಲ್ ವಿಮಾನದಲ್ಲಿ ಬೋರ್ಡಿಂಗ್ ಆಗದೆ ಅಲ್ಲೇ ಉಳಿದುಕೊಂಡಿದ್ದಾರೆ. ಪ್ಯಾಸೆಂಜರ್ ಲಿಸ್ಟ್​ನಲ್ಲಿ ಪ್ರಜ್ವಲ್​ ರೇವಣ್ಣ ಅವರ ಹೆಸರು ಸಹ ಇಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಹುಬ್ಬಳ್ಳಿ : ಅಂಜಲಿ ಹ*ತ್ಯೆ ಕೇಸ್​ – ದೂರು ಬಂದಿದ್ರೂ ನಿರ್ಲಕ್ಷ್ಯ, ಬೆಂಡಿಗೇರಿ ಠಾಣೆಯ ಇನ್ಸ್​ಪೆಕ್ಟರ್-ಕಾನ್ಸ್​​ಟೇಬಲ್ ಸಸ್ಪೆಂಡ್..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here