ಬೆಂಗಳೂರು : ಗೂಡ್ಸ್ ಲಾರಿ ಮೆಟ್ರೋ ಕಾಮಗಾರಿಯ ಗೋಡೆಗೆ ಡಿಕ್ಕಿ ಹೊಡೆದಿರುವ ಘಟನೆ ನಗರದ ನಾಗವಾರ-ಹೆಬ್ಬಾಳ ಮಾರ್ಗದ ಕೆಂಪಾಪುರದ ಬಳಿ ನಡೆದಿದೆ. ಇಂದು ಬೆಳಗ್ಗೆ 7ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದ್ದು, ನಿಯಂತ್ರಣ ತಪ್ಪಿ ಗೂಡ್ಸ್ ಲಾರಿ ಮೆಟ್ರೋ ಕಾಮಗಾರಿ ನಡೆಯುತ್ತಿದ್ದ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.
ನಾಗವಾರ-ಹೆಬ್ಬಾಳ ಮಾರ್ಗದ ಕೆಂಪಾಪುರದ ಬಳಿಯಿರುವ ಔಟರ್ರಿಂಗ್ ರೋಡ್ ಸರ್ವೀಸ್ ರಸ್ತೆಯ ಮುಖ್ಯರಸ್ತೆಯಲ್ಲಿ 10 ಚಕ್ರದ ಲಾರಿ ಮೆಟ್ರೋ ಕಾಮಗಾರಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಎರಡು ಜೆಸಿಬಿ ಬಳಸಿ ಪೊಲೀಸರು ಲಾರಿಯನ್ನು ತೆಗೆಯಲು ಪ್ರಯತ್ನಪಡುತ್ತಿದ್ದಾರೆ.
ಈ ಅವಘಡದಿಂದಾಗಿ ರಸ್ತೆ ಸಂಪೂರ್ಣ ಬಂದ್ ಆಗಿದ್ದು, 10ಕಿಮೀ ವರೆಗೂ ಟ್ರಾಫಿಕ್ ಜಾಮ್ ಉಂಟಾಗಿದೆ. ಹೆಬ್ಬಾಳದಿಂದ ರಾಮಮೂರ್ತಿನಗರದವರೆಗೆ ಸಂಪೂರ್ಣವಾಗಿ ಟ್ರಾಫಿಕ್ ಜಾಮ್ ಆಗಿದೆ.
ಇದರಿಂದಾಗಿ ಸತತ 1 ಗಂಟೆಗಳ ಕಾಲ ವಾಹನಗಳು ನಿಂತಲ್ಲೇ ನಿಂತು, ವಾಹನ ಚಾಲಕರು ಪರದಾಡುವಂತಾಯಿತು. ಕಾದು ಬೇಸತ್ತು ಹೋಗಿ, ಕೊನೆಗೆ ಟೈಂ ಆದ ಹಿನ್ನೆಲೆ ಬೈಕ್ ಸವಾರರು ಅಪಘಾತಗೊಂಡಿರುವ ಲಾರಿ ಕೆಳಗೆ ನುಗ್ಗಿಸಿ ಮುಂದೆ ಸಾಗುತ್ತಿರುವ ಪ್ರಸಂಗ ಕೂಡ ನಡೆದಿದೆ.
ಇದನ್ನೂ ಓದಿ : ಡಿನೋಟಿಫಿಕೇಷನ್ ಪ್ರಕರಣ – ಕೇಂದ್ರ ಸಚಿವ ಹೆಚ್ಡಿಕೆ ವಿರುದ್ಧ ಕಾಂಗ್ರೆಸ್ ‘ಹೈ’ ಸಮರ..!