ತಿರುಪತಿ : ಕಳೆದ ಕೆಲ ದಿನಗಳಿಂದ ವಿಮಾನಗಳಲ್ಲಿ ಬಾಂಬ್ ಇಟ್ಟಿರುವ ಬೆದರಿಕೆ ಪ್ರಕರಣಗಳು ಪದೇ ಪದೇ ಹೆಚ್ಚಾಗುತ್ತಿದ್ದು, ಇದೀಗ ಇಂತಹದೇ ಪ್ರಕರಣ ವಿಶ್ವಪ್ರಸಿದ್ಧ ತಿರುಪತಿಯಲ್ಲಿ ಕೇಳಿ ಬಂದಿದೆ. ಆಂಧ್ರಪ್ರದೇಶದ ತಿರುಪತಿಯಲ್ಲಿ ಬಾಂಬ್ ಬೆದರಿಕೆ ಇರುವ ಬಗ್ಗೆ ಆಘಾತಕಾರಿ ದೂರು ಕೇಳಿ ಬಂದಿದ್ದು, ರಾಜ್ಯ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ.
ಲೀಲಾ ಮಹಲ್, ಕಪಿಲ ತೀರ್ಥಂ ಮತ್ತು ಅಲಿಪಿರಿ ಹೋಟೆಲ್ಗಳಿಗೆ ಈಮೇಲ್ ಮೂಲಕ ಬೆದರಿಕೆಗಳು ಬಂದಿವೆ. ಹೋಟೆಲ್ಗಳಲ್ಲಿ ಬಾಂಬ್ ಸ್ಫೋಟದ ಸುದ್ದಿ ತಿಳಿದ ತಕ್ಷಣ ಪೊಲೀಸರು, ಹೋಟೆಲ್ಗಳನ್ನ ಖಾಲಿ ಮಾಡಿಸಿ ಸುಮಾರು 3 ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದಾರೆ.
ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದಲೂ ಶೋಧ ಕಾರ್ಯ ನಡೆದಿದ್ದು, ಯಾವುದೇ ಸ್ಫೋಟಕ ಪತ್ತೆಯಾಗದ ಹಿನ್ನೆಲೆ ಹುಸಿ ಇ-ಮೇಲ್ ಬೆದರಿಕೆ ಎಂದು ಪೊಲೀಸರು ನಿರ್ಧಾರ ಮಾಡಿದ್ದಾರೆ. ಇನ್ನು ಡ್ರಗ್ ಕಿಂಗ್ಪಿನ್ ಜಾಫರ್ ಸಾಧಿಕ್ ಬಂಧಿಸಿದ್ದಕ್ಕೆ ಪ್ರತಿಕಾರದ ಬೆದರಿಕೆ ಎಂದು ಹೇಳಲಾಗಿದ್ದು, ಪಾಕ್ ISI ಎಂದು ಅನಾಮಿಕರು ನಮೋದಿಸಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ : ಚನ್ನಪಟ್ಟಣ ಉಪಚುನಾವಣೆ : ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ..!