Download Our App

Follow us

Home » ಅಪರಾಧ » ಇಂದು A2 ಆರೋಪಿ ದರ್ಶನ್​​ರನ್ನು ಮೈಸೂರಿಗೆ ಕರೆದೊಯ್ದು ಸ್ಥಳ ಮಹಜರು..!

ಇಂದು A2 ಆರೋಪಿ ದರ್ಶನ್​​ರನ್ನು ಮೈಸೂರಿಗೆ ಕರೆದೊಯ್ದು ಸ್ಥಳ ಮಹಜರು..!

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬ ಅಮಾಯಕ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ಕೇಸ್​ನಲ್ಲಿ ನಟ ದರ್ಶನ್​ ಅಂಡ್ ​ಗ್ಯಾಂಗ್ ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ದಿನ ಕಳೆದಂತೆ ರೇಣುಕಾಸ್ವಾಮಿ ಕೊಲೆ ಕೇಸ್​ ಬಗ್ಗೆ ಪೊಲೀಸ್​ ಅಧಿಕಾರಿಗಳು ಒಂದೊಂದೆ ಸಾಕ್ಷಿಯನ್ನು ಕಲೆ ಹಾಕುತ್ತಿದ್ದಾರೆ.

ಇದೀಗ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಕೆಲವೇ ಕ್ಷಣಗಳಲ್ಲಿ ದರ್ಶನ್​​ ಅಂಡ್​​ ಗ್ಯಾಂಗ್ ಅನ್ನು ಸ್ಪಾಟ್​ ಮಹಜರ್​ಗಾಗಿ ಮೈಸೂರಿಗೆ ಕರೆದೊಯ್ಯುಲಿದ್ದಾರೆ. ರೇಣುಕಸ್ವಾಮಿ ಮರ್ಡರ್​ ನಂತರ ದರ್ಶನ್ ಅವರು ಮೈಸೂರಿಗೆ ತೆರಳಿದ್ದರು. ಅಲ್ಲಿನ ಖಾಸಗಿ ಹೋಟೆಲ್​​ನಲ್ಲಿ ಡಿ ಗ್ಯಾಂಗ್​​ ಸಭೆ ಮಾಡಿತ್ತು.

ಹೀಗಾಗಿ ದರ್ಶನ್ ಉಳಿದುಕೊಂಡಿದ್ದ ಖಾಸಗಿ ಹೋಟೆಲ್ ಸೇರಿದಂತೆ ಹಲವೆಡೆ ಸ್ಥಳ ಮಹಜರು ಮಾಡೋ ಸಾಧ್ಯತೆ ಇದೆ. ವಿಚಾರಣೆ ದೃಷ್ಟಿಯಲ್ಲಿ ಇದು ತುಂಬಾನೇ ಮುಖ್ಯ ಆಗಲಿದೆ. ದರ್ಶನ್ ಮೈಸೂರಿನಲ್ಲಿ ಏನು ಮಾಡಿದರು, ಕೊಲೆಗೆ ಸಂಬಂಧಿಸಿ ಅವರು ಹೋಟೆಲ್​ನಲ್ಲಿ ಚರ್ಚೆ ಮಾಡಿದ್ದರೇ ಎನ್ನುವ ಕುರಿತು ತನಿಖೆ ನಡೆಯಲಿದೆ. ಇನ್ನು ಜೂನ್​​​​ 20ರಂದು  ದರ್ಶನ್​ ಕಸ್ಟಡಿ ಅಂತ್ಯ  ಆಗಲಿದ್ದು, ಈ ಹಿನ್ನೆಲೆ ಇಂದೇ ಮೈಸೂರಿಗೆ ಕರೆದೊಯ್ದು ಮಹಜರ್​​ ನಡೆಸಲಿದ್ದಾರೆ.

ಇದನ್ನೂ ಓದಿ : ಬಿಗ್​ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ ಹೊಸ ಸಿನಿಮಾಗೆ ಅಭಿನಯ ಚಕ್ರವರ್ತಿ ಸಾಥ್..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here