ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬ ಅಮಾಯಕ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ ಕೇಸ್ನಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ದಿನ ಕಳೆದಂತೆ ರೇಣುಕಾಸ್ವಾಮಿ ಕೊಲೆ ಕೇಸ್ ಬಗ್ಗೆ ಪೊಲೀಸ್ ಅಧಿಕಾರಿಗಳು ಒಂದೊಂದೆ ಸಾಕ್ಷಿಯನ್ನು ಕಲೆ ಹಾಕುತ್ತಿದ್ದಾರೆ.
ಇದೀಗ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಕೆಲವೇ ಕ್ಷಣಗಳಲ್ಲಿ ದರ್ಶನ್ ಅಂಡ್ ಗ್ಯಾಂಗ್ ಅನ್ನು ಸ್ಪಾಟ್ ಮಹಜರ್ಗಾಗಿ ಮೈಸೂರಿಗೆ ಕರೆದೊಯ್ಯುಲಿದ್ದಾರೆ. ರೇಣುಕಸ್ವಾಮಿ ಮರ್ಡರ್ ನಂತರ ದರ್ಶನ್ ಅವರು ಮೈಸೂರಿಗೆ ತೆರಳಿದ್ದರು. ಅಲ್ಲಿನ ಖಾಸಗಿ ಹೋಟೆಲ್ನಲ್ಲಿ ಡಿ ಗ್ಯಾಂಗ್ ಸಭೆ ಮಾಡಿತ್ತು.
ಹೀಗಾಗಿ ದರ್ಶನ್ ಉಳಿದುಕೊಂಡಿದ್ದ ಖಾಸಗಿ ಹೋಟೆಲ್ ಸೇರಿದಂತೆ ಹಲವೆಡೆ ಸ್ಥಳ ಮಹಜರು ಮಾಡೋ ಸಾಧ್ಯತೆ ಇದೆ. ವಿಚಾರಣೆ ದೃಷ್ಟಿಯಲ್ಲಿ ಇದು ತುಂಬಾನೇ ಮುಖ್ಯ ಆಗಲಿದೆ. ದರ್ಶನ್ ಮೈಸೂರಿನಲ್ಲಿ ಏನು ಮಾಡಿದರು, ಕೊಲೆಗೆ ಸಂಬಂಧಿಸಿ ಅವರು ಹೋಟೆಲ್ನಲ್ಲಿ ಚರ್ಚೆ ಮಾಡಿದ್ದರೇ ಎನ್ನುವ ಕುರಿತು ತನಿಖೆ ನಡೆಯಲಿದೆ. ಇನ್ನು ಜೂನ್ 20ರಂದು ದರ್ಶನ್ ಕಸ್ಟಡಿ ಅಂತ್ಯ ಆಗಲಿದ್ದು, ಈ ಹಿನ್ನೆಲೆ ಇಂದೇ ಮೈಸೂರಿಗೆ ಕರೆದೊಯ್ದು ಮಹಜರ್ ನಡೆಸಲಿದ್ದಾರೆ.
ಇದನ್ನೂ ಓದಿ : ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ ಹೊಸ ಸಿನಿಮಾಗೆ ಅಭಿನಯ ಚಕ್ರವರ್ತಿ ಸಾಥ್..!