ಬೆಂಗಳೂರು : ಚುನಾವಣಾ ಆಯೋಗವು ಲೋಕಸಭಾ ಚುನಾವಣಾ ದಿನಾಂಕವನ್ನು ಘೋಷಿಸಿದ ಬೆನ್ನಲ್ಲೇ, ಎಲ್ಲಾ ರಾಜಕೀಯ ಪಕ್ಷಗಳು ಅಧಿಕಾರದ ಚುಕ್ಕಾಣಿ ಹಿಡಿಯಲು ಭರ್ಜರಿ ತಯಾರಿ ನಡೆಸುತ್ತಿದೆ. ಕೆಲವು ದಿನಗಳ ಹಿಂದೆಯಷ್ಟೇ ಬಿಜೆಪಿ ಮೂರು ಕ್ಷೇತ್ರಗಳಾದ ಮಂಡ್ಯ, ಹಾಸನ ಹಾಗೂ ಕೋಲಾರ ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿತ್ತು.
ಇದೀಗ ಜೆಡಿಎಸ್ ಗೆ 3 ಕ್ಷೇತ್ರವೆಂದು ಖಚಿತವಾದ ಬಳಿಕ ಮಂಡ್ಯ ಕ್ಷೇತ್ರದ ಟಿಕೆಟ್ ಜೆಡಿಎಸ್ಗೆ ಫಿಕ್ಸ್ ಆಗಿದೆ. ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದಾರೆ. ಆದರೆ ಟಿಕೆಟ್ ಸಿಗುತ್ತೆ ಅಂತಿದ್ದ ಹಾಲಿ ಸಂಸದೆ ಸುಮಲತಾ ನಡೆ ಇನ್ನೂ ನಿಗೂಢವಾಗಿದೆ.
ಇದೀಗ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಕೈ ತಪ್ಪಿದ ಕಾರಣಕ್ಕೆ ಅಸಮಾಧಾನಗೊಂಡಿರುವ ಸುಮಲತಾ ಅವರು ಬೆಂಗಳೂರಿನ ಜೆ.ಪಿನಗರದ ನಿವಾಸದಲ್ಲಿ ಮಂಡ್ಯ ಭಾಗದ ನಾಯಕರ ಜೊತೆ ಸಭೆ ನಡೆಸಿ ಮಂಡ್ಯ ಬಿಟ್ಟು ಕೊಡೋ ಮಾತೇ ಇಲ್ಲ ಎಂದು ತಮ್ಮ ನಿರ್ಧಾರ ತಿಳಿಸಿದ್ದಾರೆ.
ಹೀಗಾಗಿ ಅಸಮಾಧಾನಗೊಂಡಿರುವ ಸುಮಲತಾ ಅವರ ಮನವೊಲಿಕೆಗೆ ಎಚ್ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ. ಸದ್ಯ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿರುವ ಹೆಚ್ಡಿಕೆ ಇಂದು ಮಧ್ಯಾಹ್ನದ ನಂತರ ಜೆಪಿನಗರದ ಸುಮಲತಾ ನಿವಾಸಕ್ಕೆ ಭೇಟಿ ನೀಡಿ ಮಂಡ್ಯದಲ್ಲಿ ಸ್ಪರ್ಧೆ ಬೇಡ ಎಂದು ಮನವೊಲಿಕೆ ಮಾಡುವ ಸಾಧ್ಯತೆ ಇದ್ದು, ಕುಮಾರಸ್ವಾಮಿ ಸುಮಲತಾ ಭೇಟಿ ಭಾರಿ ಕುತೂಹಲ ಮೂಡಿಸಿದೆ.
ಇದನ್ನೂ ಓದಿ : ಯುಗಾದಿ ಹಬ್ಬದ ಮಾಂಸಕ್ಕಾಗಿ ಚೀಟಿ ಹಾಕಿದವರಿಗೆ ಟೋಪಿ : ಕೋಟಿ ಕೋಟಿ ನುಂಗಿದ ಅಸಾಮಿ ಎಸ್ಕೇಪ್..!