Download Our App

Follow us

Home » ರಾಜಕೀಯ » ಟಿಕೆಟ್ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂಡಿರೋ ಸುಮಲತಾ : ಇಂದು ಮಾಜಿ ಸಿಎಂ ಕುಮಾರಸ್ವಾಮಿಯಿಂದ ಸುಮಲತಾ ಭೇಟಿ ಸಾಧ್ಯತೆ..!

ಟಿಕೆಟ್ ಕೈ ತಪ್ಪಿದ್ದಕ್ಕೆ ಅಸಮಾಧಾನಗೊಂಡಿರೋ ಸುಮಲತಾ : ಇಂದು ಮಾಜಿ ಸಿಎಂ ಕುಮಾರಸ್ವಾಮಿಯಿಂದ ಸುಮಲತಾ ಭೇಟಿ ಸಾಧ್ಯತೆ..!

ಬೆಂಗಳೂರು : ಚುನಾವಣಾ ಆಯೋಗವು ಲೋಕಸಭಾ ಚುನಾವಣಾ ದಿನಾಂಕವನ್ನು ಘೋಷಿಸಿದ ಬೆನ್ನಲ್ಲೇ, ಎಲ್ಲಾ ರಾಜಕೀಯ ಪಕ್ಷಗಳು ಅಧಿಕಾರದ ಚುಕ್ಕಾಣಿ ಹಿಡಿಯಲು ಭರ್ಜರಿ ತಯಾರಿ ನಡೆಸುತ್ತಿದೆ. ಕೆಲವು ದಿನಗಳ ಹಿಂದೆಯಷ್ಟೇ ಬಿಜೆಪಿ ಮೂರು ಕ್ಷೇತ್ರಗಳಾದ ಮಂಡ್ಯ, ಹಾಸನ ಹಾಗೂ ಕೋಲಾರ ಕ್ಷೇತ್ರಗಳನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿತ್ತು.

ಇದೀಗ ಜೆಡಿಎಸ್ ಗೆ 3 ಕ್ಷೇತ್ರವೆಂದು ಖಚಿತವಾದ ಬಳಿಕ ಮಂಡ್ಯ ಕ್ಷೇತ್ರದ ಟಿಕೆಟ್ ಜೆಡಿಎಸ್‌‌ಗೆ  ಫಿಕ್ಸ್ ಆಗಿದೆ. ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದಾರೆ. ಆದರೆ ಟಿಕೆಟ್ ಸಿಗುತ್ತೆ ಅಂತಿದ್ದ ಹಾಲಿ ಸಂಸದೆ ಸುಮಲತಾ ನಡೆ ಇನ್ನೂ ನಿಗೂಢವಾಗಿದೆ.

ಇದೀಗ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಕೈ ತಪ್ಪಿದ ಕಾರಣಕ್ಕೆ ಅಸಮಾಧಾನಗೊಂಡಿರುವ ಸುಮಲತಾ ಅವರು ಬೆಂಗಳೂರಿನ ಜೆ.ಪಿನಗರದ ನಿವಾಸದಲ್ಲಿ ಮಂಡ್ಯ ಭಾಗದ ನಾಯಕರ ಜೊತೆ  ಸಭೆ ನಡೆಸಿ ಮಂಡ್ಯ ಬಿಟ್ಟು ಕೊಡೋ ಮಾತೇ ಇಲ್ಲ ಎಂದು ತಮ್ಮ ನಿರ್ಧಾರ ತಿಳಿಸಿದ್ದಾರೆ.

ಹೀಗಾಗಿ ಅಸಮಾಧಾನಗೊಂಡಿರುವ ಸುಮಲತಾ ಅವರ ಮನವೊಲಿಕೆಗೆ ಎಚ್‌ಡಿ ಕುಮಾರಸ್ವಾಮಿ ಮುಂದಾಗಿದ್ದಾರೆ. ಸದ್ಯ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿರುವ ಹೆಚ್‌ಡಿಕೆ ಇಂದು ಮಧ್ಯಾಹ್ನದ ನಂತರ ಜೆಪಿನಗರದ ಸುಮಲತಾ ನಿವಾಸಕ್ಕೆ ಭೇಟಿ ನೀಡಿ ಮಂಡ್ಯದಲ್ಲಿ ಸ್ಪರ್ಧೆ ಬೇಡ ಎಂದು ಮನವೊಲಿಕೆ ಮಾಡುವ ಸಾಧ್ಯತೆ ಇದ್ದು, ಕುಮಾರಸ್ವಾಮಿ ಸುಮಲತಾ ಭೇಟಿ ಭಾರಿ ಕುತೂಹಲ ಮೂಡಿಸಿದೆ.

ಇದನ್ನೂ ಓದಿ : ಯುಗಾದಿ ಹಬ್ಬದ ಮಾಂಸಕ್ಕಾಗಿ ಚೀಟಿ ಹಾಕಿದವರಿಗೆ ಟೋಪಿ : ಕೋಟಿ ಕೋಟಿ ನುಂಗಿದ ಅಸಾಮಿ ಎಸ್ಕೇಪ್..!

Leave a Comment

DG Ad

RELATED LATEST NEWS

Top Headlines

ಪ್ಲೀಸ್‌ ಒಂದು ಚಾನ್ಸ್​ ಕೊಡಿ ಬಿಗ್​ಬಾಸ್… ಜಗದೀಶ್, ರಂಜಿತ್ ಹೊರಹೋಗ್ತಿದ್ದಂತೆ ಕಣ್ಣೀರಿಟ್ಟ ಸ್ಪರ್ಧಿಗಳು..!

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಶಾಕಿಂಗ್ ಬೆಳವಣಿಗೆ ನಡೆಯುತ್ತಿದೆ. ಸ್ಪರ್ಧಿಗಳೆಲ್ಲರೂ ಜಗದೀಶ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದರಿಂದ ಜಗದೀಶ್ ಕೋಪಗೊಂಡು ಮಹಿಳಾ ಸ್ಪರ್ಧಿಗಳ ವಿರುದ್ಧ ಅಶ್ಲೀಲ

Live Cricket

Add Your Heading Text Here