Download Our App

Follow us

Home » ಸಿನಿಮಾ » ನಟ ದರ್ಶನ್​ಗೆ ನಾಳೆ ನಿರ್ಣಾಯಕ ದಿನ – ಏನಾಗಲಿದೆ ಬೇಲ್ ಭವಿಷ್ಯ?

ನಟ ದರ್ಶನ್​ಗೆ ನಾಳೆ ನಿರ್ಣಾಯಕ ದಿನ – ಏನಾಗಲಿದೆ ಬೇಲ್ ಭವಿಷ್ಯ?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿಯಾಗಿರುವ ನಟ ದರ್ಶನ್​​ಗೆ ನಾಳೆ ನಿರ್ಣಾಯಕ ದಿನವಾಗಿದೆ. ಮಧ್ಯಂತರ ಜಾಮೀನು ಪಡೆದು ಜೈಲಿಂದ ಹೊರಗೆ ಬಂದಿರುವ ನಟ ದರ್ಶನ್ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಾಮೀನು ಸಿಗುವ ದಿನಕ್ಕಾಗಿ ದರ್ಶನ್ ಕಾಯ್ತಿದ್ದಾರೆ. ನಾಳೆ ಮಧ್ಯಾಹ್ನ 2.30ಕ್ಕೆ ಹೈಕೋರ್ಟ್​ನಲ್ಲಿ  ಜಾಮೀನು ತೀರ್ಪು ಹೊರಬೀಳಲಿದೆ.

ಇನ್ನು ವೈದರ ಸಲಹೆಯಂತೆ ದರ್ಶನ್​ಗೆ ನಾಳೆ ಶಸ್ತ್ರ ಚಿಕಿತ್ಸೆ ನಡೆಯುವ ಸಾಧ್ಯತೆಯಿದೆ. ದರ್ಶನ್​ ಸರ್ಜರಿಗೆ ಪತ್ನಿ ವಿಜಯಲಕ್ಷ್ಮೀ ಗ್ರಿನ್​ ಸಿಗ್ನಲ್​ ಕೊಟ್ಟಿದ್ದು, ಡಾ. ನವೀನ್ ಅಪ್ಪಾಜಿ ಗೌಡ ನಾಳೆ 10 ಗಂಟೆಯ ನಂತರ ವೈದ್ಯರ ಜೊತೆ ಚರ್ಚಿಸಿ ಸರ್ಜರಿಗೆ ಪ್ಲಾನ್ ಮಾಡಲಿದ್ದಾರೆ.

ಕಳೆದೆರಡು ವಾರಗಳಿಂದ ಹೈಕೋರ್ಟ್ ನ್ಯಾ.ವಿಶ್ವಜಿತ್ ಶೆಟ್ಟಿ ಪೀಠದಲ್ಲಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಏಳು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆದಿತ್ತು. ಆರೋಪಿಗಳ ಪರ ವಕೀಲರು ವಾದ-ಪ್ರತಿವಾದ ಮಂಡಿಸಿದ್ರು. ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ತೀರ್ಪು ಕಾಯ್ದಿರಿಸಿದ್ರು. ನಾಳೆ ಮಧ್ಯಾಹ್ನ 2:30ಕ್ಕೆ ಜಾಮೀನು ತೀರ್ಪು ಹೊರಬರಲಿದೆ.

ಇದನ್ನೂ ಓದಿ : ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಗ್ರ್ಯಾಂಡ್ ಮಾಸ್ಟರ್ ಡಿ. ಗುಕೇಶ್..!

Leave a Comment

DG Ad

RELATED LATEST NEWS

Top Headlines

ರೋಮ್ಯಾನ್ಸ್ ಸೀನ್​ ಶೂಟಿಂಗ್ ಮಾಡುವಾಗ ಕಂಟ್ರೋಲ್ ತಪ್ಪಿದ್ರಾ ವರುಣ್ ಧವನ್ ? – ನಟಿ ಜೊತೆಗಿನ ಹಾಟ್​ ವಿಡಿಯೋ ಲೀಕ್​!

ಮುಂಬೈ : ಬಾಲಿವುಡ್​ನಲ್ಲಿ ಯಂಗ್ ಹೀರೋ ಆಗಿ ಗುರುತಿಸಿಕೊಂಡಿರುವ ನಟ ವರುಣ್ ಧವನ್ ಸಿನಿಮಾದ ರೋಮ್ಯಾನ್ಸ್ ಸೀನ್​ ಶೂಟಿಂಗ್ ವೇಳೆ ಕಂಟ್ರೋಲ್ ತಪ್ಪಿದ್ರಾ ಎಂಬ ಚರ್ಚೆಗಳು ಶುರುವಾಗಿವೆ. ನಟ

Live Cricket

Add Your Heading Text Here